Advertisement
ಜೋರು ಮಳೆಯಾದರೆ ಈ ತಡೆಗೋಡೆ ಉಳಿಯುವುದಿಲ್ಲ ಎಂಬ ಮಾತು ಸ್ಥಳೀಯರಲ್ಲಿ ಆಗಲೇ ಇತ್ತು. ಬರುವ ಮಳೆಗಾಲದ ಒಳಗಾಗಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಎಂವಿಆರ್ ಇನ್ಫ್ರಾ ಒಟ್ಟಾರೆ ಕಾರ್ಯನಿರ್ವಹಣೆಯ ಬಗ್ಗೆ ಅನುಮಾನದ ಮಾತುಗಳು ಕೇಳಿಬರುತ್ತಿದೆ. ರಸ್ತೆಯ ತಡೆಗೋಡೆ ಕುಸಿತದ ಸಂದರ್ಭದಲ್ಲಿ ಅದೃಷ್ಟವಶಾತ್ ಈ ಸ್ಥಳಕ್ಕೆ ಬಂದ ನಾಲ್ಕು ಚಕ್ರದ ವಾಹನಕ್ಕೆ ಯಾವುದೇ ಅಪಘಾತ ಸಂಭವಿಸಿಲ್ಲ. ಆದರೆ ಒಟ್ಟಾರೆ ಪರಿಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಇಂತಹ ಹಲವು ಘಟನೆಗಳು ಸಂಭವಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
Advertisement
Panaji: ಭಾರಿ ಮಳೆಗೆ ಕುಸಿದು ಬಿದ್ದ ಹೆದ್ದಾರಿ ಬದಿ ತಡೆಗೋಡೆ… ತಪ್ಪಿದ ದುರಂತ
04:41 PM Jun 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.