Advertisement

ಅಪಘಾತ ತಡೆಗೆ ಹೆದ್ದಾರಿ ತಡೆದು ಪ್ರತಿಭಟನೆ

06:11 PM Dec 04, 2021 | Shwetha M |

ನಿಡಗುಂದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ಬಸ್‌ ನಿಲ್ದಾಣದ ಬಳಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಸತೀಶ ಕೊಡಲಗಿ ಹಾಗೂ ಪಿಎಸ್‌ಐ ಅವರಿಗೆ ಮನವಿ ಸಲ್ಲಿಸಿದರು.

Advertisement

ರೈತ ಮುಖಂಡ ಬಸವರಾಜ ಕುಂಬಾರ, ರೈತ ಸಂಘದ ತಾಲೂಕು ಅಧ್ಯಕ್ಷ ತಿರುಪತಿ ಬಂಡಿವಡ್ಡರ ಮಾತನಾಡಿ, ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಆದರೂ ಸಂಬಂಧಿಸಿದ ಅ ಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ನಿಡಗುಂದಿ ಪಟ್ಟಣ ತಾಲೂಕು ಕೇಂದ್ರವಾಗಿದ್ದರಿಂದ ತಾಲೂಕಿನ ಎಲ್ಲ ಗ್ರಾಮಸ್ಥರು, ರೈತರು ಆಗಮಿಸುತ್ತಾರೆ. ಜತೆಗೆ ಪ್ರವಾಸಿತಾಣವಾದ ಆಲಮಟ್ಟಿ ಹಾಗೂ ಯಲಗೂರು, ಯಲ್ಲಮ್ಮನ ಬೂದಿಹಾಳ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವಿದ್ಯಾಭ್ಯಾಸಕ್ಕಾಗಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಜೀವ ಕೈಯಲ್ಲಿ ಹಿಡಿದು ಈ ಹೆದ್ದಾರಿ ದಾಟುವಂತಾಗಿದೆ. ಹೀಗಾಗಿ ಕೂಡಲೇ ಬೃಹದಾಕಾರದ ರೋಡ್‌ ಬ್ರೇಕ್‌ ಅಳವಡಿಸಿ ಬಿಳಿ ಬಣ್ಣದ ಪಟ್ಟಿ ಹಾಕಬೇಕು. ಅಲ್ಲದೇ ಸಿಗ್ನಲ್‌ ಅಳವಡಿಸುವಂತೆ ಆಗ್ರಹಿಸಿದರು.

ಈ ವೇಳೆ ಶಿವಪ್ಪ ಪಾಟೀಲ, ಸುಭಾಷ ಚೌಪಡೆ, ಮಲ್ಲಯ್ಯ ನಾಗೂರಮಠ, ಶಿವಪ್ಪ ಬೇವಿನಮಟ್ಟಿ, ಪೀರಸಾಬ ನದಾಫ್‌, ಮುದುಕಪ್ಪ ವಾಲಿಕಾರ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next