Advertisement

ಸದನದಲ್ಲಿ ಹಿಜಾಬ್, ಹಲಾಲ್ ಕಟ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಆತಂಕಕಾರಿ : ವಿಶ್ವನಾಥ್

03:07 PM Apr 05, 2022 | Team Udayavani |

ಹುಣಸೂರು: ಶೋಷಿತರ ಕುರಿತು ಚರ್ಚಿಸಬೇಕಾದ ಸದನದಲ್ಲಿ ಹಿಜಾಬ್, ಹಲಾಲ್ ಕಟ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ. ಹೆಚ್‍. ವಿಶ್ವನಾಥ್ ಬೇಸರ ವ್ಯಕ್ತಪಡಿದ್ದಾರೆ.

Advertisement

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ 115 ನೇ ಜಯಂತಿಯಲ್ಲಿ ಜಗಜೀವನರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು ಮಾತನಾಡಿದ ಅವರು ಶೋಷಿತ ಸಮುದಾಯಗಳ ಅಭಿವೃದ್ದಿಗಾಗಿ ಸಿದ್ದರಾಮಯ್ಯ 28 .5 ಸಾವಿರ ಕೋಟಿ ನೀಡಿದ್ದಾರೆ. ಜೊತೆಗೆ ಆ ವರ್ಗದ ಜನರೇ ಗುತ್ತಿಗೆ ನಿರ್ವಹಿಸಲು ಅವಕಾಶ ಕಲ್ಪಿಸಿದ್ದರು. ಬೊಮ್ಮಾಯಿಯವರು 28 ಸಾವಿರ ಕೋಟಿ ಘೋಷಿಸಿದ್ದಾರೆ. ಆದರೆ ಯಾರ ಉದ್ದಾರವಾಗಿದೆ. ಶೋಷಿತರ ಬದಲಿಗೆ ಉಳ್ಳವರ ಅಭಿವೃದ್ದಿಯಾಗುತ್ತಿರುವುದು ಪರಿಸ್ಥಿತಿಯ ದ್ಯೋತಕವೇ ಸರಿ ಎಂದರು‌.

ಈ ಬಗ್ಗೆ ಚರ್ಚೆಯಾಗಬೇಕಾದ ಸದನದಲ್ಲಿ ಹಲಾಲ್ ಕಟ್. ಹಿಜಾಬ್. ಈಗ ಮೈಕ್ ಸೆಟ್ ಕುರಿತು ಚರ್ಚೆ ಮಾಡುತ್ತಿದ್ದಾರೆ. ಶೋಷಿತ ಸಮುದಾಯದ ಶಾಸಕರು ಸಹ ಈ ಬಗ್ಗೆ ಚಕಾರವೆತ್ತುತ್ತಿಲ್ಲವೆಂದು ಬೇಸರಿಸಿದರು.

ಜಗಜೀವನರಾಂ ಜಯಂತಿಯಿಂದ ಅಂಬೇಡ್ಕರ್ ಜಯಂತಿವರೆಗಿನ 9 ದಿನಗಳ ಕಾರ್ಯಕ್ರಮವನ್ನು ಶೋಷಿತರ ಶರನ್ನವರಾತ್ರಿಯನ್ನಾಗಿ ಆಚರಿಸುವ ಮೂಲಕ ಶಾಸಕರು ರಾಜ್ಯದಲ್ಲೇ ಉತ್ತಮ ಕಾರ್ಯಕ್ರಮ ರೂಪಿಸಿದ್ದಾರೆಂದು ಶ್ಲಾಘಿಸಿದರು.

ಶಾಸಕ ಮಂಜುನಾಥ್ ಮಾತನಾಡಿ ಶೋಷಿತ ಸಮುದಾಯಗಳು ಮದ್ಯವರ್ತಿಗಳ ಹಾವಳಿಗೆ ಸಿಲುಕಬಾರದೆಂದು 9 ದಿನಗಳ ಕಾಲ ಇಲಾಖೆಗಳ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

Advertisement

ಇದನ್ನೂ ಓದಿ:ಈಶ್ವರಪ್ಪ ಒಬ್ಬ ದೇಶದ್ರೋಹಿ,ರಾಷ್ಟ್ರಧ್ವಜ ದ್ರೋಹಿ; ಅವರಿಗೆಲ್ಲಾ ಪ್ರತಿಕ್ರಿಯಿಸಲ್ಲ: ಡಿಕೆಶಿ

ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಲಂಚ ಕೊಡುವುದು ತಪ್ಪು. ಲಂಚಮುಕ್ತವಾಗಿ ಶೋಷಿತ ಸಮುದಾಯಗಳು ಸೌಲಭ್ಯಗಳನ್ನು ಪಡೆಯಲು ಈ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಎಲ್ಲಾ ಗ್ರಾ.ಪಂ.ಪ್ರತಿನಿಧಿಗಳು ಹಾಗೂ ಸಮುದಾಯದ ಮುಖಂಡರು ಭಾಗವಹಿಸಿ, ಇತರರಿಗೂ ಅರಿವು ಮೂಡಿಸುವಂತೆ ಮನವಿ ಮಾಡಿದರು.

ಶಿಕ್ಷಕ ಜೆ.ಮಹದೇವ್, ಜಗಜೀವನರಾಂ ಜೀವನ, ಹೋರಾಟದ ಕುರಿತು ಉಪನ್ಯಾಸ ನೀಡಿದರು. ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸಮೀನಾ ಪರ್ವಿನ್, ಉಪಾಧ್ಯಕ್ಷ ದೇವನಾಯಕ, ಸದಸ್ಯರಾದ ಅನುಷಾ, ಸೌರಭಸಿದ್ದರಾಜು, ಆಶಾ, ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ.ತಹಸೀಲ್ದಾರ್ ಡಾ. ಅಶೋಕ್. ಇ.ಓ ಗಿರೀಶ್, ಜಿ.ಪಂ ಉಸ್ತುವಾರಿಯಾದ ನಂದಕುಮಾರ್, ಸಮಾಜಕಲ್ಯಾಣಾಧಿಕಾರಿ ಮೋಹನ್ ಕುಮಾರ್, ಮುಖಂಡರಾದ ನಂದಸ್ವಾಮಿ, ನಿಂಗರಾಜಮಲ್ಲಾಡಿ, ರಾಜಪ್ಪ, ಸೇರಿದಂತೆ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next