ಉಡುಪಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್- ಕೇಸರಿ ಶಾಲು ವಿವಾದ ಇಂದು ನಗರದ ಎಂಜಿಎಂ ಕಾಲೇಜಿಗೂ ವ್ಯಾಪಿಸಿದೆ. ಮಂಗಳವಾರ ಬೆಳಗ್ಗೆ ಬುರ್ಖಾ, ಹಿಜಾಬ್ ತೊಟ್ಟಿದ್ದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು, ಪೇಟ ತೊಟ್ಟಿದ್ದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ್ದರು ಗೊಂದಲದ ವಾತಾವರಣ ಸೃಷ್ಟಿಯಾಗಿದೆ.
ಹಿಜಾಬ್- ಬುರ್ಖಾಗೆ ವಿರೋಧವಾಗಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಮತ್ತು ಪೇಟ ಧರಿಸಿ ಬಂದಿದ್ದರು. ಆಡಳಿತ ಮಂಡಳಿಯು ಗೇಟ್ ಬಂದ್ ಮಾಡಿ ಕಾಲೇಜು ಪ್ರವೇಶಕ್ಕೆ ತಡೆ ನೀಡಿದೆ.
ಇದನ್ನೂ ಓದಿ:ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ: ಕೆ.ಎಸ್. ಈಶ್ವರಪ್ಪ ಕುಟುಕು
ಕೇಸರಿ ಪೇಟ ಮತ್ತು ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ನಡುವೆ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಪರಸ್ಪರ ಘೋಷಣೆ ಕೂಗುತ್ತಿದ್ದಾರೆ. ಉಪನ್ಯಾಸಕರು, ಪೊಲೀಸರ ಮನವೊಲಿಕೆಗೆ ಬಗ್ಗದ ವಿದ್ಯಾರ್ಥಿಗಳು, ಕಾಲೇಜು ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.