Advertisement

ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಗೆ ಪ್ರತಿಯಾಗಿ ಕೇಸರಿ ಪೇಟ: ಉದ್ವಿಗ್ನ ವಾತಾವರಣ

10:45 AM Feb 08, 2022 | Team Udayavani |

ಉಡುಪಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್- ಕೇಸರಿ ಶಾಲು ವಿವಾದ ಇಂದು ನಗರದ ಎಂಜಿಎಂ ಕಾಲೇಜಿಗೂ ವ್ಯಾಪಿಸಿದೆ. ಮಂಗಳವಾರ ಬೆಳಗ್ಗೆ ಬುರ್ಖಾ, ಹಿಜಾಬ್ ತೊಟ್ಟಿದ್ದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು, ಪೇಟ ತೊಟ್ಟಿದ್ದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ್ದರು‌ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

Advertisement

ಹಿಜಾಬ್- ಬುರ್ಖಾಗೆ ವಿರೋಧವಾಗಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಮತ್ತು ಪೇಟ ಧರಿಸಿ ಬಂದಿದ್ದರು. ಆಡಳಿತ ಮಂಡಳಿಯು ಗೇಟ್ ಬಂದ್ ಮಾಡಿ ಕಾಲೇಜು ಪ್ರವೇಶಕ್ಕೆ ತಡೆ ನೀಡಿದೆ.

ಇದನ್ನೂ ಓದಿ:ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ: ಕೆ.ಎಸ್. ಈಶ್ವರಪ್ಪ ಕುಟುಕು

ಕೇಸರಿ ಪೇಟ ಮತ್ತು ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ನಡುವೆ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಪರಸ್ಪರ ಘೋಷಣೆ ಕೂಗುತ್ತಿದ್ದಾರೆ. ಉಪನ್ಯಾಸಕರು, ಪೊಲೀಸರ ಮನವೊಲಿಕೆಗೆ ಬಗ್ಗದ ವಿದ್ಯಾರ್ಥಿಗಳು, ಕಾಲೇಜು ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next