Advertisement

ಹಿಜಾಬ್ ವಿವಾದ: ಶಿವಮೊಗ್ಗದಲ್ಲಿ 58 ವಿದ್ಯಾರ್ಥಿಗಳು ಸಸ್ಪೆಂಡ್ ಆಗಿಲ್ಲ; ಡಿಸಿ ಗರಂ

11:55 AM Feb 19, 2022 | Team Udayavani |

ಶಿವಮೊಗ್ಗ : ಹಿಜಾಬ್ ಗೆ ಅವಕಾಶ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಸಸ್ಪೆಂಡ್ ಆಗಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಆರ್ ಶನಿವಾರ ಹೇಳಿದ್ದಾರೆ.

Advertisement

ನಿರಂತರ ಪ್ರತಿಭಟನೆ ನಡೆಸುತ್ತಿದ್ದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಕರ್ನಾಟಕ ಪಬ್ಲಿಕ್ ಶಾಲೆಯ 58 ವಿದ್ಯಾರ್ಥಿಗಳ ಅಮಾನತು ಆಗಿದ್ದಾರೇ ಎಂದು ಸುದ್ದಿ ಹಬ್ಬಿಸಲಾಗಿತ್ತು.

ಹಿಜಬ್ ಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಭಟನೆ, ಘೋಷಣೆ ಕೂಗುತ್ತಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಟನೆ ನಡೆಸದೇ ತರಗತಿಗೆ ಹಾಜರಾಗುವಂತೆ ಶಿಕ್ಷಕರು ಮನವಿ ಮಾಡಿದ್ದರು. ಶಿಕ್ಷಕರ ಮಾತು ಧಿಕ್ಕರಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಮುಂದುವರಿಸಿದ್ದರು.

ಈ ಬಗ್ಗೆ ಶಾಲೆಯ ಪ್ರಾಂಶುಪಾಲರ ವಿಚಾರಿಸಿದರೆ ನಾವು ಯಾವುದೇ ವಿದ್ಯಾರ್ಥಿಗಳನ್ನು ಅಮಾನತು ಮಾಡಿಲ್ಲ. ವಿದ್ಯಾರ್ಥಿಗಳಿಗೆ ಹೆದರಿಸಲು ಈ ರೀತಿ ಹೇಳಿದ್ದೇವು ಅಷ್ಟೇ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಮಾನತು ವಿಚಾರದಿಂದ ಅಧಿಕಾರಿಗಳಲ್ಲೇ ಗೊಂದಲ ಉಂಟಾಗಿದ್ದು, ತಪ್ಪು ಮಾಹಿತಿ ನೀಡಿದ್ದಕ್ಕೆ ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next