Advertisement

ಕಾಂಗ್ರೆಸ್ ನಾಯಕರಿಂದ ಹಿಜಾಬ್ ವಿವಾದ ಬಿಗಡಾಯಿಸಿದೆ: ನಾಗೇಶ್

12:24 PM Feb 11, 2022 | Team Udayavani |

ಬೆಂಗಳೂರು :  ಕಾಂಗ್ರೆಸ್‍ನ ಹಲವು ನಾಯಕರು ಪ್ರಚೋದನೆ ಮಾಡಿದ ಬಳಿಕ ಹಿಜಾಬ್ ಪರಿಸ್ಥಿತಿ ಬಿಗಡಾಯಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಆರಂಭದಲ್ಲಿ ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಇರಲಿಲ್ಲ. ನಂತರ ಕೆಲವು ರಾಜಕೀಯಪಕ್ಷಗಳು ನುಸುಳಿ ಇದನ್ನು ಈ ಹಂತಕ್ಕೆ ತಂದಿವೆ ಎಂದು ಕಿಡಿಕಾರಿದ್ದಾರೆ.

ಹಿಜಬ್-ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸುಪ್ರೀಂಗೆ ಹೋಗೋರು ಹೋಗಲಿ. ನಮ್ಮದೇನು ಅಭ್ಯಂತರ ಇಲ್ಲ. ಕೋರ್ಟ್ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದ್ದಾರೆ.

ಲಾಯರ್‍ಗಳನ್ನ ಇಟ್ಟು ಕೋರ್ಟ್‍ನಲ್ಲಿ ವಾದ ಮಾಡೋ ಶಕ್ತಿ ನನಗಂತೂ ಇಲ್ಲ, ಕಾಲೇಜಿನ ಆ ಹುಡುಗೀರಿಗೂ ಅ ಶಕ್ತಿ ಇರಲ್ಲ. ಆದರೆ ಯಾರೋ ಈ ವಿದ್ಯಾರ್ಥಿನಿಯರ ಹಿಂದೆ ಇದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next