Advertisement

ಶಿಕ್ಷಣಕ್ಕಿಂತ ಹಿಜಾಬ್ ಮುಖ್ಯ, ವಿದ್ಯಾರ್ಥಿಗಳ ಪಟ್ಟು: ಕಾಲೇಜು ಸುತ್ತ ನಿಷೇಧಾಜ್ಞೆ ಜಾರಿ

10:52 AM Feb 17, 2022 | Team Udayavani |

ವಿಜಯಪುರ: ಜಿಲ್ಲೆಯಲ್ಲಿಹಿಜಾಬ್-ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಸರ್ಕಾರಿ ಪದವಿ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರು ಶಿಕ್ಷಣಕ್ಕಿಂತ ಹಿಜಾಬ್ ಮುಖ್ಯ ಎಂದು ಪಟ್ಟುಹಿಡಿದಿದ್ದಾರೆ. ಅಲ್ಲದೇ ತರಗತಿ ಬಹಿಷ್ಕಿರಿಸಿ ಪ್ರತಿಭಟನೆಗೆ ಇಳಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ದಂಡಾಧಿಕಾರಿಗಳು ಕಾಲೇಜಿಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

Advertisement

ಹಿಜಾಬ್ ನಮ್ಮ ಧಾರ್ಮಿಕ ಪರಂಪರೆಯ ಪ್ರತೀಕ. ಹೀಗಾಗಿ ಮುಂದಿನ‌ ಪೀಳಿಗೆಗೆ ಇದನ್ನು ಕೊಂಡೊಯ್ಯಬೇಕಿದೆ. ಹೀಗಾಗಿ ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಅವಕಾಶ ನೀಡಬೇಕೆಂದು ಆಗ್ರಹಿಸಿ ಹೋರಾಟಕ್ಕೂ ಅಣಿಯಾಗಿದ್ದಾರೆ.

ವಿಜಯಪುರ ನಗರದ ಸರ್ಕಾರಿ ಮಹಿಳಾ ಪ.ಪೂ. ಹಾಗೂ ಪದವಿ ಕಾಲೇಜು ಪರಿಸರದಲ್ಲಿ ಪೊಲೀಸರು ಕಾಲೇಜುಗಳ ಪ್ರವೇಶ ದ್ವಾರದಲ್ಲೇ ಬ್ಯಾರಿಕೇಡ್ ಅಳವಡಿಸಿದ್ದಾರೆ. ವಿದ್ಯಾರ್ಥಿನಿಯರು ಪ್ರತಿಭಟನೆ ಮುಂದುವರೆಸಿದ್ದಾರೆ.

ಮತ್ತೊಂದೆಡೆ ಸರ್ಕಾರಿ ಕಾಲೇಜುಗಳ ಪರಿಸರದಲ್ಲೇ ಹೂವಿನ ಮಾರುಕಟ್ಟೆ ಇದ್ದು, ನಿಷೇಧಾಜ್ಞೆ ಪರಿಣಾಮ ಹೂವಿನ ಮಾರುಕಟ್ಟೆ ಬಂದ್ ಮಾಡಿಸಲಾಗಿದೆ. ಇದರಿಂದ ಹೂವಿನ ವ್ಯಾಪಾರಿಗಳು ವ್ಯಾಪಾರ ಇಲ್ಲದೇ ಬಾಡುತ್ತಿರುವ ಹೂವಿನ ನಷ್ಟದಿಂದ ಕಂಗಾಲಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next