Advertisement

Hijab issue; ಸಾಧಕ – ಭಾಧಕ ನೋಡಿಕೊಂಡು ಸರ್ಕಾರದಿಂದ ತೀರ್ಮಾನ: ಜಿ.ಪರಮೇಶ್ವರ್

05:27 PM Dec 24, 2023 | Team Udayavani |

ಮಂಗಳೂರು: ಹಿಜಾಬ್ ನಿಷೇಧ ಮಾಡಿಲ್ಲ ಎಂದು ಬೊಮ್ಮಾಯಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನಾವು ಆದೇಶವೇ ಮಾಡಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಮಾಡಿದ್ದರೂ ಸಹ ನಾವು ಅದನ್ನು ಪರಿಶೀಲನೆ ಮಾಡುತ್ತೇವೆಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಾಧಕ ಭಾಧಕ ನೋಡಿಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಗೊಂದಲ ಮಾಡುವ ಅವಶ್ಯಕತೆಯಿಲ್ಲ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ಹೇಳಿದರು.

Advertisement

ಮಂಗಳೂರಿನಲ್ಲಿ ಮಾತನಾಡಿದ ಅವರು, ಆ ಸಮುದಾಯವದವರು ಹಿಂದಿನಿಂದಲೂ ಸಹ ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಇತ್ತಿಚೇಗಷ್ಟೇ ಬಿಜೆಪಿ ಸರ್ಕಾರ ಬಂದಾಗ ಅದರ ಬಗ್ಗೆ ಬೇರೆ ಬೇರೆ ವ್ಯಾಖ್ಯಾನವಾಗಿದೆ ಎಂದರು.

ಸಂವಿಧಾನವನ್ನು ಬಿಟ್ಟು ನಾವು ಯಾವುದೇ ಕೆಲಸ ಮಾಡುವುದಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಮಾಡಿದರೂ ಕೆಲವರಿಗೆ ನೋವಾಗಬಹುದು ಕೆಲವರಿಗೆ ಸಂತೋಷವಾಗಬಹುದು. ಆದ್ರೆ ಸಂವಿಧಾನದ ಚೌಕಟ್ಟಿನಲ್ಲಿ ಮಾತ್ರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next