Advertisement

Govt ಅಭಿವೃದ್ಧಿ ವೈಫಲ್ಯ ಮುಚ್ಚಲು ಹಿಜಾಬ್‌ ಪ್ರಸ್ತಾಪ: ಕಾರಜೋಳ

07:09 PM Dec 24, 2023 | Shreeram Nayak |

ವಿಜಯಪುರ:ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ. ಅಭಿವೃದ್ಧಿ ಶೂನ್ಯವಾಗಿದ್ದು, ಜನರಿಂದ ಇದನ್ನು ಮರೆಮಾಚಲು ಸಿಎಂ ಸಿದ್ದರಾಮಯ್ಯ ಹಿಜಾಬ್‌ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹರಿಹಾಯ್ದಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕೆಲಸಗಳನ್ನು ಸ್ಥಗಿತಗೊಳಿಸಿ, ಲಂಚ ಕೇಳುತ್ತಿದ್ದಾರೆ. ಇಂಥದನ್ನು ಜನರಿಂದ ಮರೆಮಾಚಿ, ಗಮನ ಬೇರೆಡೆ ಸೆಳೆಯಲು ಲಜ್ಜೆಗೆಟ್ಟ ಸಿದ್ದರಾಮಯ್ಯ ಸರ್ಕಾರ ಹಿಜಾಬ್‌ ವಿಷಯದ ರಾಜಕೀಯ ಗಿಮಿಕ್‌ ಮಾಡುತ್ತಿದೆ. ಸಂವಿಧಾನದಲ್ಲಿ ಶಿಕ್ಷಣ, ಆರೋಗ್ಯ, ಜನ ಕಲ್ಯಾಣದ ಉಲ್ಲೇಖವಿದೆ. ಕಾಲಕಾಲಕ್ಕೆ ಸಿದ್ದರಾಮಯ್ಯ ಇಂಥ ವಿಚಾರಗಳನ್ನು ತರುತ್ತಾರೆ.

ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ ಆರ್‌ಎಸ್‌ಎಸ್‌ ಹಾಗೂ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಸ್ವಾತಂತ್ರ್ಯ ಯೋಧರ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲದ ನಡೆ. ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯ ಯೋಧರು, ಇತಿಹಾಸದ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಾತನಾಡಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next