Advertisement

“ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಂಡು ಮಾತನಾಡಲಿ’

12:20 AM Feb 06, 2022 | Team Udayavani |

ಮಂಗಳೂರು: ಹಿಜಾಬ್‌ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಇದರ ಬಗ್ಗೆ ಮಾತನಾಡುವ ಮೊದಲು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಎಷ್ಟು ನಿರ್ಧಾರಗಳನ್ನು ಮಾಡಿದ್ದರು ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಟಿಪ್ಪು ಜಯಂತಿ ಮೂಲಕ ಸಾಮರಸ್ಯವನ್ನು ಕೆಡಿಸುವ ಯತ್ನ ಮಾಡಿದರು. ಶಾದಿ ಭಾಗ್ಯದ ಹೆಸರಿನಲ್ಲಿ ಕೆಲವೇ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟವರು. ಈ ರೀತಿಯ ನಿರ್ಧಾರಗಳು ಸಮಾಜದ ಸಾಮರಸ್ಯಕ್ಕೆ ಹೇಗೆ ಧಕ್ಕೆ ತಂದಿವೆ ಎಂಬುದನ್ನು ಈಗ ಹಿಜಾಬ್‌ ಕುರಿತು ಮಾತನಾಡುವ ಅವರು ಅರ್ಥಮಾಡಿಕೊಳ್ಳಲಿ ಎಂದರು.

ತಾಲಿಬಾನೀಕರಣಕ್ಕೆ ಅವಕಾಶ ನೀಡೆವು
ಶಾಲೆಯ ನಿಯಮ ಹಾಗೂ ಅನುಶಾಸನ ಪಾಲಿಸಿಕೊಂಡು ಕಲಿಯಬೇಕಾದದ್ದು ಧರ್ಮ. ಅದರೊಂದಿಗೆ ಬೇರೆ ಧರ್ಮ ಬರುವುದು ಸರಿಯಲ್ಲ. ಶಾಲೆಯ ನಿಯಮದಡಿಯಲ್ಲಿಯೇ ಎಲ್ಲರೂ ಕಲಿಯಬೇಕು. ಯಾರಿಗೆ ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಸಾಧ್ಯ ಇಲ್ಲವೋ ಅವರು ಬೇರೆ ದಾರಿ ನೋಡಿಕೊಳ್ಳಬಹುದು. ಇಲ್ಲಿ ತಾಲಿಬಾನ್‌ ಮಾಡಲು ಅವಕಾಶ ನೀಡುವುದಿಲ್ಲ ಎಂದರು.

ದನ ಕಳ್ಳತನ, ದನ ಆಕ್ರಮ ಸಾಗಾಟದ ವಿರುದ್ಧ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ. ಮುಖ್ಯಮಂತ್ರಿಯವರು, ಗೃಹಸಚಿವರು ಹಾಗೂ ಉಸ್ತುವಾರಿ ಸಚಿವರ ಸಭೆ ನಡೆಸಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ನಳಿನ್‌ ತಿಳಿಸಿದರು.

ಇದನ್ನೂ ಓದಿ:ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸರಿಪಡಿಸಲು ಹಿಜಾಬ್‌ ಹುಟ್ಟಿಕೊಂಡಿದೆ: ರೆಡ್ಡಿ

Advertisement

ಸಂಪುಟ: ಸಿಎಂ ವಿವೇಚನೆ
ಸಚಿವ ಸಂಪುಟದ ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಸಂದರ್ಭ ಬಂದಾಗ ರಾಷ್ಟ್ರೀಯ ನಾಯಕರ ಜತೆ ಮಾತನಾಡಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ನಳಿನ್‌ ಕುಮಾರ್‌ ಉತ್ತರಿಸಿದರು.

ಮಂತ್ರಿಮಂಡಲದಲ್ಲಿ ಇರಬೇಕು ಎಂದು ಅಪೇಕ್ಷೆ ಪಡುವುದು ತಪ್ಪಲ್ಲ. ಆದರೆ ಎಲ್ಲ ಶಾಸಕರಿಗೂ ಮಂತ್ರಿ ಸ್ಥಾನ ನೀಡಲು ಸಾಧ್ಯವಿಲ್ಲ. ಅದಕ್ಕೆ ನಿಯಮಗಳಿವೆ. ರಾಷ್ಟ್ರೀಯ ನಾಯಕರು ಹಾಗೂ ನಾವು ಚರ್ಚೆ ಮಾಡಿ ಯಾರಿಗೆ ಅವಕಾಶ ನೀಡಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇವೆ. ಹಾದಿಬೀದಿಯಲ್ಲಿ ಚರ್ಚೆ ಮಾಡುವುದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next