Advertisement

ಹಿಜಾಬ್ ತೀರ್ಪಿಗೆ ಅಸಮಾಧಾನ: ನಾಳೆ ಕರ್ನಾಟಕ ಬಂದ್ ಗೆ ಕರೆ

01:07 PM Mar 16, 2022 | Team Udayavani |

ಬೆಂಗಳೂರು : ಹಿಜಾಬ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಆಕ್ರೋಶ ಹೊರ ಹಾಕಿರುವ ಅಮೀರ್-ಇ-ಶರಿಯತ್ ನಾಳೆ, ಮಾರ್ಚ್ 17 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.

Advertisement

ಕೋರ್ಟ್ ತೀರ್ಪು ನಿರಾಶಾದಾಯಕವಾಗಿದ್ದು, ನಾಳೆ ಶಾಂತಿಯುತವಾಗಿ ಬಂದ್ ನಡೆಸಬೇಕು ಎಂದು ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ ಕರೆ ನೀಡಿದ್ದಾರೆ.

ಬಲವಂತದ ಬಂದ್ ಆಗಲಿ, ಜಾಥಾ , ಮೆರವಣಿಗೆ ಆಗಲಿ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

”ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ, ಇದನ್ನು ಪ್ರಶ್ನಿಸುವಂತಿಲ್ಲ” ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next