Advertisement

ಈಶ್ವರಪ್ಪಗೆ ಹಿಜಡಾಗಳೇ ತಾಕತ್ತು ತೋರಿಸುತ್ತಾರೆ

10:50 PM Sep 18, 2019 | Team Udayavani |

ಬೆಂಗಳೂರು: ಬಿಜೆಪಿ ಸೇರಲು ಮುಂದಾಗಿದ್ದವರು, ಮುಸ್ಲಿಮರ ಮತಗಳು ಕೈತಪ್ಪುತ್ತವೆ ಎಂಬ ಕಾರಣಕ್ಕೆ ಕಾಂಗ್ರೆಸ್‌ನಲ್ಲೇ ಉಳಿದವರು ಹಿಜಿಡಾಗಳು ಎಂದು ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರಪ್ಪಗೆ, ಹಿಜಡಾಗಳೇ ತಮ್ಮ ಶಕ್ತಿ ಏನೆಂದು ತೋರಿಸುತ್ತಾರೆ ಎಂದು ಮಾಜಿ ಸಚಿವ ಯು.ಟಿ.ಖಾದರ್‌ ತಿರುಗೇಟು ನೀಡಿದ್ದಾರೆ.

Advertisement

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಅಲ್ಪಸಂಖ್ಯಾತರನ್ನು ಬೈಯುವುದೇ ದೇಶಪ್ರೇಮ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿಯ ಹೇಳಿಕೆ ನೀಡಿದರೆ ಸರ್ಕಾರದಲ್ಲಿ ದೊಡ್ಡ ಸ್ಥಾನ ಸಿಗುತ್ತದೆ ಅಂದುಕೊಂಡಿದ್ದರು. ಆದರೆ, ದೊಡ್ಡ ಸ್ಥಾನ ಸಿಗಲಿಲ್ಲ. ಹೀಗಾಗಿ ಅವರ ಪಕ್ಷದ ನಾಯಕರ ಮೇಲೆ ಕೋಪ ತೋರಿಸಲು ಆಗುವುದಿಲ್ಲ. ಅದಕ್ಕೆ ನಮ್ಮ ಮೇಲೆ ಕೋಪ ತೋರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next