Advertisement

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

11:57 AM Jul 04, 2024 | Team Udayavani |

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಭಾಸ್ಕೇರಿಯ ವರ್ನಕೇರಿ ಬಳಿ ಗುಡ್ಡ ಕುಸಿತ ಉಂಟಾಗಿ ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತಗೊಂಡಿದೆ.

Advertisement

ವಾರದ ಹಿಂದೆ ಇದೆ ಸ್ಥಳದ ಹತ್ತಿರದಲ್ಲೇ ಗುಡ್ಡ ಕುಸಿತ ಉಂಟಾಗಿ, ದೊಡ್ಡ ಬಂಡೆ ಉರುಳಿ ಬಿದ್ದಿತ್ತು. ಇಂದು ಮುಂಜಾನೆ ಗುಡ್ಡದೊಂದಿಗೆ ಮರ ಕೂಡ ಬಿದ್ದಿರುವುದು ವಾಹನ ಸಂಚಾರ ಕೆಲಕಾಲ ಸ್ಥಗಿತಗೊಳಿಸುವಂತಾಗಿದೆ.

ಮೂರಕ್ಕೂ ಅಧಿಕ ವಿದ್ಯುತ್ ಕಂಬ ಮುರಿದು ತಂತಿಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿತ್ತು.

ರಸ್ತೆಗೆ ಅಡ್ಡ ಬಿದ್ದಿರುವ ಮರ ತೆರವುಗೊಳಿಸಿದ ಬಳಿಕ ಏಕಮುಖ ರಸ್ತೆ ಸಂಚಾರ ಪ್ರಾರಂಭಿಸಿದ್ದಾರೆ. ಸ್ಥಳದಲ್ಲಿ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬ ತೆರವುಗೊಳಿಸಿ ಗುಡ್ಡ ಕುಸಿತದ ಮಣ್ಣು ತೆರವು ಬಳಿಕ ವಿದ್ಯುತ್ ಸಂಪರ್ಕ ಕಲ್ಪಿಸಲು ಸಜ್ಜಾಗುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next