Advertisement

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

12:56 AM Mar 19, 2024 | Team Udayavani |

ಹೊಸದಿಲ್ಲಿ: ಹಿಮಾಚಲ ಪ್ರದೇಶದ ಕಾಂಗ್ರೆಸ್‌ನ ಉಚ್ಚಾಟಿತ 6 ಮಂದಿ ಶಾಸಕರಿಗೆ ಹಿನ್ನಡೆಯಾಗಿದೆ. ಇತ್ತೀಚೆಗೆ ಮುಕ್ತಾಯವಾಗಿದ್ದ ರಾಜ್ಯಸಭೆ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪಕ್ಷದ ವಿಪ್‌ ಉಲ್ಲಂ ಸಿ ಮತ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ವಿಧಾನಸಭೆ ಸ್ಪೀಕರ್‌ ನೀಡಿದ್ದ ಅನ ರ್ಹತೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

Advertisement

ನ್ಯಾ| ಸಂಜೀವ್‌ ಖನ್ನಾ ಮತ್ತು ದೀಪಂ ಕರ್‌ ದತ್ತಾ ನೇತೃತ್ವದ ನ್ಯಾಯ ಪೀಠ ಸೋಮವಾರ ಈ ಬಗ್ಗೆ ಆದೇಶ ನೀಡಿದೆ. ಜತೆಗೆ ಸ್ಪೀಕರ್‌ ಕುಲದೀಪ್‌ ಸಿಂಗ್‌ ಪಥಾ ನಿಯಾ ಅವರ ಕಚೇರಿಗೆ ನೋಟಿಸ್‌ ಜಾರಿ ಮಾಡಿದೆ.

“ಈ ಕೋರ್ಟ್‌ ಸ್ಪೀಕರ್‌ ನೀಡಿದ ಶಾಸಕರ ಅನರ್ಹತೆ ಆದೇಶದ ವಿರುದ್ಧ ತಡೆಯಾಜ್ಞೆ ನೀಡುವುದಿಲ್ಲ. ಅದಕ್ಕೆ ಅನುಮತಿಯೂ ಇಲ್ಲ. ಜತೆಗೆ ಅನರ್ಹ ಗೊಂಡ ಶಾಸಕರ ಕ್ಷೇತ್ರಗಳಿಗೆ ಚುನಾ ವಣ ಆಯೋಗ ಚುನಾವಣೆ ನಡೆಸುವ ಬಗ್ಗೆ ಆದೇಶ ನೀಡಿದೆ. ಈ ಬಗ್ಗೆ ನಾವು ಪರಿಶೀ ಲಿಸಬೇಕಾಗಿದೆ’ ಎಂದು ನ್ಯಾಯಪೀಠ ಹೇಳಿತು.

ಖ್ಯಾತ ನ್ಯಾಯವಾದಿ ಹರೀಶ್‌ ಸಾಳ್ವೆ ಅನರ್ಹ ಶಾಸಕರ ಪರ ವಾದಿಸಿದರು. ನ್ಯಾಯಪೀಠ ಮೇ 6ಕ್ಕೆ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next