Advertisement

Himachal Pradesh; 6 ಬಂಡಾಯ ಕಾಂಗ್ರೆಸ್ ಶಾಸಕರು, 3 ಪಕ್ಷೇತರರು ಬಿಜೆಪಿ ಸೇರ್ಪಡೆ

09:07 PM Mar 23, 2024 | Team Udayavani |

ಹೊಸದಿಲ್ಲಿ: ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಬಂಡಾಯ ಶಾಸಕರೊಂದಿಗೆ ಮೂವರು ಸ್ವತಂತ್ರ ಶಾಸಕರು ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Advertisement

ಬಂಡಾಯ ಕಾಂಗ್ರೆಸ್ ಶಾಸಕರು ವಿಪ್ ಉಲ್ಲಂಘಿಸಿದ ಕಾರಣಕ್ಕಾಗಿ ಅನರ್ಹಗೊಳಿಸಲಾಗಿತ್ತು. ಮೂವರು ಪಕ್ಷೇತರರಾದ ಆಶಿಶ್ ಶರ್ಮ (ಹಮೀರ್‌ಪುರ), ಹೋಶಿಯಾರ್ ಸಿಂಗ್ (ಡೆಹ್ರಾ) ಮತ್ತು ಕೆ.ಎಲ್. ಠಾಕೂರ್ (ನಲಗಢ) ಶುಕ್ರವಾರ ವಿಧಾನಸಭೆ ಕಾರ್ಯದರ್ಶಿ ಯಶ್ ಪಾಲ್ ಶರ್ಮ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಶನಿವಾರ ಬಿಜೆಪಿ ಸೇರಿದ್ದಾರೆ.ಮೂವರೂ 2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದ ಕಾರಣಕ್ಕೆ ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು.

ಆರು ಕಾಂಗ್ರೆಸ್ ಶಾಸಕರ ಅನರ್ಹತೆಯೊಂದಿಗೆ, 68 ಸದಸ್ಯರ ವಿಧಾನಸಭೆಯಲ್ಲಿ ಸ್ಪೀಕರ್ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ ಬಲ 40 ರಿಂದ 34 ಕ್ಕೆ ಇಳಿದಿದೆ. ಬಿಜೆಪಿ 25 ಸದಸ್ಯರನ್ನು ಹೊಂದಿದೆ.

ಬಿಜೆಪಿ ಸೇರಿದ ಶಾಸಕರನ್ನು ಶಿಮ್ಲಾದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಇನ್ನೊಂದೆಡೆ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next