Advertisement

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ; ಓರ್ವನ ರಕ್ಷಣೆ, ಇನ್ನಿಬ್ಬರಿಗಾಗಿ ಮುಂದುವರಿದ ಶೋಧಕಾರ್ಯ

11:30 AM Aug 03, 2021 | Team Udayavani |

ಶಿಮ್ಲಾ : ಮಂಗಳವಾರ ಮುಂಜಾನೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಮೂವರು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂದು ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಸೋಲನ್ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದಿಂದ (ಡಿಇಒಸಿ) ಬಂದ ವರದಿಯ ಪ್ರಕಾರ ಮಂಗಳವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಕಸೌಲಿ ಉಪ ವಿಭಾಗದ ಪರ್ವಾನೊ ಸೆಕ್ಟರ್ ಮೂರರ ಹೋಟೆಲ್ ಬಳಿ ಭೂಕುಸಿತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ರಕ್ಷಣಾ ಕಾರ್ಯ ಮುಂದುವರಿಸಿದ ತಂಡ ಓರ್ವನನ್ನು ರಕ್ಷಿಸಿದ್ದು, ಅವಶೇಷಗಳಡಿ ಸಿಲುಕಿದ್ದ ಇನ್ನಿಬ್ಬರ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸಿದೆ.

ಇದನ್ನೂ ಓದಿ :ಆಗಸ್ಟ್ 15ಕ್ಕೆ ಕಾಶ್ಮೀರದಲ್ಲಿ ಬೀಭತ್ಸ ಕೃತ್ಯ ಎಸಗಲು ಐಎಸ್‌ಐ ಚಿತಾವಣೆ

Advertisement
Advertisement

Udayavani is now on Telegram. Click here to join our channel and stay updated with the latest news.

Next