Advertisement
ಹಾಸನ ವೈದ್ಯಕೀಯ ಕಾಲೇಜು ವಿದಾರ್ಥಿನಿಲಯ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಆಸ್ಪತ್ರೆಯ ಮೇಲ್ದರ್ಜೆ ಗೇರಿಸುವ ಕಾಮಗಾರಿಯನ್ನು ಮೂರು ಮೂರು ಹಂತಗಳಲ್ಲಿ ಪೂರ್ಣಗೊಳಿಸಲಾಗುವುದು. ಈ ವರ್ಷ 50 ಕೋಟಿ ರೂ. ಸರ್ಕಾರ ಬಿಡುಗಡೆ ಮಾಡಲಿದೆ ಎಂದು ವಿವರಿಸಿದರು.
Related Articles
ನೀಡಿದಂತೆ ರೈತರ ಕೃಷಿ ಸಾಲ ಮನ್ನಾ ಮಾಡಲು ಬದ್ಧರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿರುವುದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗದು. ಆದ್ದರಿಂದ ಮಿತ್ರ ಪಕ್ಷ ಕಾಂಗ್ರೆಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ರೈತರ ಸಾಲ ಮನ್ನಾ ಮಾಡಲಿದೆ ಎಂದು ಹೇಳಿದರು.
Advertisement
ಶಾಸಕ ಪ್ರೀತಂ ಜೆ.ಗೌಡ, ಹಾಸನ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೆ.ಶಂಕರ್, ಆಡಳಿತಾಧಿಕಾರಿ ಚಿದಾನಂದ, ನಗರಸಭೆ ಅಧ್ಯಕ್ಷ ಡಾ.ಎಚ್.ಎಸ್. ಅನಿಲ್ಕುಮಾರ್, ಆಯುಕ್ತ ಬಿ.ಎ.ಪರಮೇಶ್, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ರಾಜ್ಕುಮಾರ್ ಅವರೂ ಉಪಸ್ಥಿತರಿದ್ದರು
ಚಾರ್ಮಾಡಿ ಘಾಟಿ ಅಭಿವೃದ್ಧಿಗೆ ಶೀಘ್ರ ಪ್ರಸ್ತಾವನೆ ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸಮಗ್ರ ಅಭಿವೃದ್ಧಿಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ 250 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ, ಶಿರಾಡಿ, ಆಗುಂಬೆ ಘಾಟಿಗಳಲ್ಲಿ ರಸ್ತೆ ಪರಿಶೀಲನೆ ನಡೆಸಿದ್ದೇನೆ. ಒಂದು ಅಂದಾಜು ಪಟ್ಟಿಯನ್ನೂ ಈಗಾಗಲೇ ಕಳುಹಿಸಿದ್ದೇನೆ ಎಂದು ವಿವರಿಸಿದರು. ಮಳೆ ಕಡಿಮೆ ಆದ ಮೇಲೆ ತಡೆಗೋಡೆ ನಿರ್ಮಾಣ ಮತ್ತು ಗುಂಡಿ ಮುಚ್ಚುವ ಕೆಲಸ ನಡೆಯಲಿದೆ. ಮಳೆಗಾಲದ ನಂತರ ಪಕ್ಕಾ ಕಾಂಕ್ರಿಟ್ ರಸ್ತೆ ನಿರ್ಮಿಸಲಾಗುವುದು. ಎಲ್ಲೆಲ್ಲಿ ವಿಸ್ತರಣೆಗೆ ಸಾಧ್ಯವೋ ಅಲ್ಲಿ ರಸ್ತೆ ವಿಸ್ತರಿಸಲಾಗುವುದು. ಎಲ್ಲ ಕಡೆ ವಿಸ್ತರಿಸಲು ತಳಭಾಗದಲ್ಲಿ ಮಣ್ಣು ತೆಗೆದರೆ ಮೇಲಿಂದ ಕುಸಿಯುವ ಅಪಾಯವಿದೆ ಎಂದರು. ಬಿಳಿಕೆರೆಯಿಂದ ಬೇಲೂರಿನವರೆಗೆ ಎರಡು ಹಂತದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಚಿಕ್ಕಮಗಳೂರಿನಿಂದ ಬೇಲೂರು ರಸ್ತೆಯನ್ನೂ ಹೆದ್ದಾರಿಯಾಗಿ ಪರಿವರ್ತಿ ಸುವ ಪ್ರಸ್ತಾಪವಿದೆ ಎಂದರು. ಹೊಸ ರೈಲ್ವೆ ಮಾರ್ಗ: ಈಗಾಗಲೇ ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ರೈಲ್ವೆ ಮಾರ್ಗದ ಕಾಮಗಾರಿಗೆ ಅನುಮತಿ ದೊರೆತಿದೆ. ಬೇಲೂರಿನಿಂದ ಹಾಸನಕ್ಕೆ ಕೇವಲ 30 ಕಿ.ಮೀ. ಮಾತ್ರ ಆಗುತ್ತದೆ. ಈ ಕಾಮಗಾರಿಯ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಿಂದಿನ ರೈಲ್ವೆ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದರು. ಈಗ ಈ ಕಾಮಗಾರಿಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿರುವುದಾಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಮಳೆ ಬಂದಾಗ ನೀರಿನಲ್ಲಿ ಮುಳುಗುವ ಕಳಸ ಹೊರನಾಡು ರಸ್ತೆಯಲ್ಲಿರುವ ಹೆಬ್ಟಾಳೆ ಸೇತುವೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಶೃಂಗೇರಿ, ಹೊರನಾಡು ಧಾರ್ಮಿಕ ಕೇಂದ್ರಗಳಾಗಿರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು. ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಪ್ರದೇಶವಾಗಿರುವುದರಿಂದ ಇಲ್ಲಿನ ಕೆಲವು ರಸ್ತೆಗಳಿಗೆ ಪ್ರಾಮು
ಖ್ಯತೆ ಕೊಡಲೇಬೇಕಿದೆ. ಈ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸುತ್ತೇನೆ. ಕರಾವಳಿಗೆ ಸಂಪರ್ಕಕಲ್ಪಿಸುವ ಶಿಶಿಲಾ ಬೈರಾಪುರ ರಸ್ತೆ ಅಭಿ ವೃದ್ಧಿಪಡಿಸುವ ಬಗ್ಗೆಯೂ ಮಾಹಿತಿ ಪಡೆದಿದ್ದೇನೆ ಎಂದರು. ಬೇಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ತೊ. ಚ.ಅನಂತಸುಬ್ಬರಾಯ ಇದ್ದರು.