Advertisement

ಕನ್ನಡ ನಮ್ಮ ಅಸ್ಮಿತೆ, ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಸಹಿಸಲಾಗದು: ಸಿದ್ದರಾಮಯ್ಯ

08:36 AM Jun 04, 2019 | Nagendra Trasi |

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸೋಮವಾರ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

Advertisement

ಕನ್ನಡ ನಮ್ಮ ಅಸ್ಮಿತೆ, ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ಹಿಂದಿ ಹೇರಿಕೆ ನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.

ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ ಎಂದು ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next