Advertisement

ಯುವಕನ ಕಗ್ಗೊಲೆ : ಸುರತ್ಕಲ್‌ ಪರಿಸರ ಉದ್ರಿಕ್ತ, ನಾಲ್ವರ ಬಂಧನ

02:47 PM Jan 03, 2018 | |

ಮಂಗಳೂರು : ನಗರದ ಸುರತ್ಕಲ್‌ನ ಕಾಟಿಪಳ್ಳದಲ್ಲಿ ಬುಧವಾರ  ಹಾಡಹಗಲೇ ಹಿಂದೂಪರ ಸಂಘಟನೆಯ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. ಹತ್ಯೆಗೀಡಾದ ಯುವಕ ದೀಪಕ್‌ ಸೂರಿಂಜೆ ಎಂದು ತಿಳಿದು ಬಂದಿದ್ದು, ಮೊಬೈಲ್‌ ಅಂಗಡಿಯೊಂದರಲ್ಲಿ ಎಕ್ಸಿಕ್ಯೂಟಿವ್‌ ಆಗಿದ್ದ ಎಂದು ತಿಳಿದು ಬಂದಿದೆ.

Advertisement

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಗಿ ಬಂದೋಬಸ್ತ್  ಕೈಗೊಂಡಿದ್ದಾರೆ. ದೀಪಕ್‌ ಬಜರಂಗದಳದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. 


ಹಿಂದೂಪರ ಕಾರ್ಯಕರ್ತ ದೀಪಕ್‌ ಹತ್ಯೆ ಖಂಡಿಸಿ ಸುರತ್ಕಲ್‌ ಪರಿಸರದಲ್ಲಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣಗೊಂಡಿದ್ದು ಕೆಲವೆಡೆಗಳಲ್ಲಿ ಬಸ್ಸುಗಳಿಗೆ ಕಲ್ಲುತೂರಾಟ ನಡೆದಿದೆ.



ಹಿಂದೂಪರ ಕಾರ್ಯಕರ್ತ ದೀಪಕ್‌ ಹತ್ಯೆಯ ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಸುರತ್ಕಲ್‌ ಪೊಲೀಸರು. ಮೂಡುಬಿದಿರೆಯ ಮಿಜಾರು ಬಳಿ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.

Advertisement

ಘಟನೆಗೆ ಸಂಬಂಧಿಸಿದಂತೆ ನಾಲ್ವರ ಬಂಧನ:

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನೀಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next