ವಿದ್ಯಾರ್ಥಿಗಳಿಗೆ ಶುಭಕೋರಿದ ಪ್ರೊ|ವೈ. ಭಾಸ್ಕರ ಶೆಟ್ಟಿ ಮಾತನಾಡಿ, ಬೇರೆ ಬೇರೆ ಕಾರಣಗಳಿಂದ ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಅವರ ಕಲಿಕೆಗೆೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂಬ ಸಂಸ್ಥೆಯ ಅಧ್ಯಕ್ಷ ಎನ್.ವಿನಯ ಹೆಗ್ಡೆಯವರ ಚಿಂತನೆಯಂತೆ ಶಾಲೆಯ 77 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಲ್ಲಿ 22 ಮಂದಿಯನ್ನು ಗುರುತಿಸಿ ರಾತ್ರಿ ಅಭ್ಯಾಸದ ತರಗತಿಯನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಶಿಸ್ತು ಮತ್ತು ಸಮಯದ ಸದುಯೋಗ ಮಾಡುವಂತೆ ತರಗತಿಯನ್ನು ಆಯೋಜಿಸಲಾಗಿದು,ª ಕಳೆದ ವರ್ಷ ನಡೆಸಿದ ತರಗತಿಯಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ಅಭ್ಯಾಸದಲ್ಲಿ ತೊಡಗಿಸಿಕೊಳ್ಳುವ ಶಿಕ್ಷಕರ ಕಾಳಜಿ ಮತ್ತು ಪರಿಶ್ರಮ ತೃಪ್ತಿ ನೀಡಿದ್ದು ಅಭಿನಂದನಾರ್ಹವಾಗಿದೆ ಎಂದರು.
Advertisement
ಶಾಲಾ ಮುಖ್ಯ ಶಿಕ್ಷಕಿ ಶಕಿಲಾ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಕಾರಣಗಳಿಂದ ಕಲಿಕೆಯಲ್ಲಿ ಹಿಂದಿಯುಳಿಯುತ್ತಿದ್ದು, ಅಂತಹ ಮಕ್ಕಳನ್ನು ಗುರುತಿಸಿ ಓದಿನಲ್ಲಿ ತೊಡಗಿಸಿ ಕೊಳ್ಳುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ರಾತ್ರಿ ತರಗತಿಗಳನ್ನು ಆಯೋಜಿಸಿದ್ದು ಉತ್ತಮ ಫಲಿತಾಂಶದ ನಿರೀಕ್ಷೆಯಿದೆ ಎಂದರು.ಹೆತ್ತವರಾದ ಪಾರ್ವತಿ, ವಿದ್ಯಾರ್ಥಿಗಳಾದ ಅಭಿಷೇಕ್, ಶರಣ್, ಶ್ರಾವಣ್, ನಿಶಾಂತ್ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಶಿಕ್ಷಕರಾದ ಗಣೇಶ್ ಶೆಟ್ಟಿ ಸ್ವಾಗತಿಸಿ, ನಿರ್ವಹಿಸಿ, ಕೇಶವ ವಂದಿಸಿದರು.