Advertisement

ಮಧ್ಯಪ್ರದೇಶದಲ್ಲಿ ನಾಥೂರಾಮ್ ಗೋಡ್ಸೆ ಅಧ್ಯಯನ ಕೇಂದ್ರ ಆರಂಭ: ಹಿಂದೂ ಮಹಾಸಭಾ

12:13 PM Jan 11, 2021 | Team Udayavani |

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಹಿಂದೂ ಮಹಾಸಭಾ ತನ್ನ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಹೆಸರಿನಲ್ಲಿ ಅಧ್ಯಯನ ಕೇಂದ್ರ(ಜ್ಞಾನಶಾಲಾ) ತೆರೆದಿದ್ದು, ಯುವ ಪೀಳಿಗೆಗೆ ವಿಭಜಿತ ಭಾರತ ಮತ್ತು ಮಹಾರಾಣಾ ಪ್ರತಾಪ್ ಸೇರಿದಂತೆ ಐತಿಹಾಸಿಕ ವೀರರ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದೆ.

Advertisement

ನಾಥೂರಾಮ್ ಗೋಡ್ಸೆ ಹೆಸರಿನ ಜ್ಞಾನಶಾಲೆಯಲ್ಲಿ ವಿಭಜಿತ ಭಾರತದ ಹಲವು ಆಯಾಮಗಳ ಬಗ್ಗೆ ಯುವ ಪೀಳಿಗೆಗೆ ಮಾಹಿತಿ ನೀಡುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದೆ.

ಅಲ್ಲದೇ ರಾಷ್ಟ್ರೀಯ ನಾಯಕರಾದ ಗುರು ಗೋವಿಂದ್ ಸಿಂಗ್, ಛತ್ರಪತಿ ಶಿವಾಜಿ ಮಹಾರಾಜ್, ಮಹಾರಾಣಾ ಪ್ರತಾಪ್ ಅವರಂತಹ ಮಹಾನ್ ಐತಿಹಾಸಿಕ ವ್ಯಕ್ತಿಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

1947ರಲ್ಲಿ ಭಾರತ ವಿಭಜನೆಯಾಗುವ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಕೈವಾಡ ಇದ್ದಿರುವುದಾಗಿ ಭಾರದ್ವಾಜ್ ಈ ಸಂದರ್ಭದಲ್ಲಿ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next