Advertisement

Ganesh Chathurthi: ಹಿಂದೂ-ಮುಸ್ಲಿಂ ಒಟ್ಟಾಗಿ ಗೌರಿ-ಗಣೇಶ ಹಬ್ಬ ಆಚರಣೆ

03:58 PM Sep 18, 2023 | Team Udayavani |

ಮೈಸೂರು: ಹಿಂದೂ-ಮುಸ್ಲಿಂ ಯುವಕರು ಒಟ್ಟಾಗಿ ಗೌರಿ ಗಣೇಶನ ಹಬ್ಬವನ್ನು ಆಚರಿಸುವ ಮೂಲಕ ಮೈಸೂರಿನಲ್ಲಿ ಗಮನಸೆಳೆದಿದ್ದಾರೆ. ಇದಕ್ಕೆ ವೇದಿಕೆಯಾಗಿದ್ದು ಶ್ರೀ ಗಣಪತಿ ಯುವಕರ ಸಂಘದ ಪದಾಧಿಕಾರಿಗಳು.

Advertisement

ಅಗ್ರಹಾರದ ಕುಂದೂರು ಮಠದ ರಸ್ತೆಯಲ್ಲಿ ಗಣೇಶನ ಮೂರ್ತಿಯನ್ನ ಪ್ರತಿಷ್ಠಾಪಿಸಿ ಹಬ್ಬ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ. ಪರಸ್ಪರ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಿಹಿತಿನಿಸಿ ಹಿಂದೂ ಮುಸ್ಲಿಂ ಭಾಯಿ…ಭಾಯಿ.. ಎಂಬ ಸಂದೇಶವನ್ನು ಜನತೆಗೆ ರವಾನಿಸಿದರು.

ಈ ಸಂದರ್ಭ ಪಾಲ್ಗೊಂಡು ಮಾತನಾಡಿದ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ನಮ್ಮ ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತಿದ್ದು, ಈ ಬಾರಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಸಮೀಪ ಬಂದಿದ್ದರಿಂದ ಉಭಯ ಸಮಾಜದ ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳುವಂತೆ ಕರೆ ನೀಡಿದರು.

ಶ್ರೀ ಗಣಪತಿ ಯುವಕರ ಸಂಘದ ಮುಖ್ಯ ಸಂಚಾಲಕ ಮೋಹನ್ ಕುಮಾರ್ ಗೌಡ ಮಾತನಡಿ, ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ಧವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ. ಆದರೆ ಕೆಲವು ಕಿಡಿಗೇಡಿಗಳಿಂದ ಎರಡು ಸಮಾಜದಲ್ಲಿ ಶಾಂತಿಯನ್ನು ಕದಡವ ಯತ್ನಗಳು ನಡೆಯುತ್ತಿದ್ದು, ಆದ್ದರಿಂದ ಎರಡು ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯ ವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು. ಈ ದಿನ ಈ ಯುವಕರು ಒಟ್ಟಾಗಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತಾ ಬಂದಿರುವುದು ಬಹಳ ಸಂತಸದ ವಿಚಾರ. ಇದೇ ರೀತಿ ಸೌಹಾರ್ದತೆ ಆಚರಣೆ ಪ್ರತಿ ಜಿಲ್ಲೆಯಲ್ಲಿ ಆದರೆ ಬಹಳ ಉತ್ತಮ ಬೆಳವಣಿಗೆಯನ್ನು ರಾಜ್ಯದಲ್ಲಿ ಕಾಣಲು ಸಾಧ್ಯವಿದೆ ಎಂದರು.

ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ , ಮೋಹನ್ ಕುಮಾರ್ ಗೌಡ,ಸಗೀರ್ ಅಹಮದ್, ಅಪ್ರೋಜ್ ಖಾನ್, ಸಾಹೇದ್ ಮುಗುದುಮ್, ನೂರ್ ಶರೀಫ್, ಸೈಯದ್ ಫಾಸಿಲ್, ಖಾಲಿದ್ ಅಹಮದ್, ನಾಗೇಂದ್ರ, ನಿಹಾಲ್, ಭುವನ್, ಪೈ.ವಿಶೃತ್, ಎಸ್.ಗೌಡ, ರಕ್ಷಿತ್, ಯಶಸ್, ಎಸ್.ಗೌಡ ಹಾಗೂ ಇನ್ನಿತರರು ಭಾಗಿಯಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next