Advertisement

ಹಿಂದೂ ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಬಾಳಬೇಕು : ಯಡಿಯೂರಪ್ಪ

05:33 PM Apr 11, 2022 | Team Udayavani |

ಬೆಂಗಳೂರು : ‘ಹಿಂದೂ ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಬಾಳಬೇಕೆಂಬುದು ನಮ್ಮ ಅಪೇಕ್ಷೆ, ಅದನ್ನು ಹಾಳು ಮಾಡುವ ಕೆಲಸ ಮಾಡಬೇಡಿ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ನಾವೆಲ್ಲಒಟ್ಟಾಗಿ ಬಾಳಬೇಕು. ಯಾರೋ ಕಿಡಿಗೇಡಿಗಳು ಸಾಮರಸ್ಯಕ್ಕೆ ಅಡ್ಡಿ ಮಾಡಿದರೆ, ಅಹಿತಕರ ಘಟನೆಗಳಿಗೆ ಕಾರಣವಾದರೆ ಸರಕಾರ ಸಹಿಸುವುದಿಲ್ಲ,ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ” ಎಂದರು.

”ನಾನೂ ಸಹ ಅವರಿಗೆ ಕಿವಿ ಮಾತು ಹೇಳುವುದಕ್ಕೆ ಬಯಸುತ್ತೇನೆ, ನಿಮ್ಮ ನಿಮ್ಮ ಕೆಲಸ ಮಾಡಿ, ಮುಸ್ಲಿಮರೂ ಗೌರವದಿಂದ ಬದುಕಬೇಕು”ಎಂದರು.

Advertisement

Udayavani is now on Telegram. Click here to join our channel and stay updated with the latest news.

Next