Advertisement

ಹರ್ಷ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಸೈದಾಪುರ ಬಂದ್

12:40 PM Feb 22, 2022 | Team Udayavani |

ಸೈದಾಪುರ: ಶಿವಮೊಗ್ಗ ಜಿಲ್ಲೆಯ ಬಜರಂಗದಳದ ಕಾರ್ಯಕರ್ತ ಹರ್ಷ ಕಗ್ಗೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.

Advertisement

ಈ ಹಿನ್ನೆಲೆಯಲ್ಲಿ ಸೈದಾಪುರ ಪಟ್ಟಣದಲ್ಲಿ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಸೈದಾಪುರ ಬಂದ್ ಗೆ ಪಟ್ಟಣದ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ  ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ನಂತರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮುಸ್ಲಿಂ ಮೂಲಭೂತ ವಾದಿಗಳಿಂದಲೇ ಹರ್ಷ ಹತ್ಯೆಯಾಗಿದೆ ಎಂದು ಆರೋಪಿಸಿ, ಪಟ್ಟಣದ  ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next