Advertisement

Bareli: ಜ್ಞಾನವಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅನುಮತಿ: ಬರೇಲಿ ಉದ್ವಿಗ್ನ

11:40 PM Feb 09, 2024 | Team Udayavani |

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಶುಕ್ರವಾರ ಭಾರೀ ಪ್ರಮಾಣದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಜ್ಞಾನವಾಪಿ ಮಸೀದಿ ಆವರಣದಲ್ಲಿ ಹಿಂದೂಗಳಿಗೆ ಪೂಜೆ ನಡೆಸಲು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಮುಸ್ಲಿಂ ಧಾರ್ಮಿಕ ಮುಖಂಡ ತಕ್ಬೀರ್‌ ರಾಜಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

Advertisement

ದೇಶದಲ್ಲಿರುವ ಮುಸ್ಲಿಂ ಸಮುದಾಯದ ಧಾರ್ಮಿಕ ಸ್ಥಳಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜೈಲು ಭರೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಪೊಲೀಸರು ನಡೆಸಿದ ಶೋಧ ಕಾರ್ಯದ ವೇಳೆ ಕಲ್ಲುಗಳು, ಲಾಠಿಗಳನ್ನು ಇರಿಸಿಕೊಂಡದ್ದು, ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next