Advertisement

Sandalwood; ಹಿರಣ್ಯ ಸುತ್ತಾಟ ಶುರು: ರಾಜವರ್ಧನ್‌ ಹೀರೋ

03:50 PM Jul 19, 2024 | Team Udayavani |

ರಾಜವರ್ಧನ್‌ ನಾಯಕರಾಗಿರುವ “ಹಿರಣ್ಯ’ ಚಿತ್ರ ಇಂದು ತೆರೆಕಾಣುತ್ತಿದೆ. ಈ ಚಿತ್ರದ ಮೇಲೆ ರಾಜವರ್ಧನ್‌ ಭರ್ಜರಿ ನಿರೀಕ್ಷೆ ಇಟ್ಟಿದ್ದಾರೆ.

Advertisement

ಚಿತ್ರದ ಬಗ್ಗೆ ಮಾತನಾಡುವ ರಾಜವರ್ಧನ್‌, “ಹಿರಣ್ಯದಲ್ಲಿ ಒಳ್ಳೆಯ ಕಥೆ ಇದೆ. ನಾನು ಅದನ್ನು ನಂಬಿದೆ. ಒಳ್ಳೆಯ ಸಿನಿಮಾವಾಗಿದೆ. ಎಲ್ಲೂ ಏನು ಮೋಸವಾಗದೆ ಸಿನಿಮಾ ಮಾಡಿದ್ದೇವೆ. ನಮ್ಮ ನಿರ್ಮಾಪಕರು ವಿಜಿ ನಾನು ತುಂಬಾ ಕಿತ್ತಾಡಿದ್ದೇವೆ. ನಿರ್ಮಾಪಕರು ತುಂಬಾ ಕನಸು ಇಟ್ಟುಕೊಂಡು ಬಂದಿದ್ದಾರೆ. ಅವರು ಹಾಕಿದ ದುಡ್ಡು ರಿಟರ್ನ್ ಆಗಬೇಕು. ನಿರ್ದೇಶಕರು ಹೊಸ ಕನಸು ಇಟ್ಟುಕೊಂಡು ಬಂದಿದ್ದಾರೆ. ಹೊಸತಂಡ ಸಿನಿಮಾ ಕಲಿತು ಮಾಡಿದ್ದಾರೆ’ ಎನ್ನುತ್ತಾರೆ.

ನಿರ್ದೆಶಕ ಪ್ರವೀಣ್‌ ಅವ್ಯುಕ್ತ್, “ಕ್ರೂರ ಗುಣ ಹೊಂದಿದ ಪಾತ್ರವನ್ನಿಟ್ಟುಕೊಂಡು ಹಿರಣ್ಯ ಸಿನೆಮಾದ ಕಥೆ ಹೆಣೆದಿದ್ದಾರೆ. ನಾಯಕಿಯಾಗಿ ರಿಹಾನಾ ನಟಿಸಿದ್ದಾರೆ. ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್‌ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವೇದಾಸ್‌ ಇನ್ಫಿನಿಟಿ ಪಿಚ್ಚರ್‌ ಬ್ಯಾನರ್‌ನಲ್ಲಿ ವಿಘ್ನೇಶ್ವರ್‌ ಮತ್ತು ವಿಜಯ್‌ ಕುಮಾರ್‌ ನಿರ್ಮಾಣ ಮಾಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next