Advertisement

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

05:20 PM Jul 22, 2024 | Team Udayavani |

ಹಾವೇರಿ: ಬೈಕ್ ಸವಾರರ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ.

Advertisement

ಮೃತರನ್ನು ಹಿರೇಕೆರೂರಿನಲ್ಲಿ ಹೆಸ್ಕಾಂ ನೌಕರರಾಗಿದ್ದ ಮಂಜುನಾಥ (35), ಹನುಮಂತಪ್ಪ (25) ಎಂದು ಗುರುತಿಸಲಾಗಿದೆ.

ಇವರಿಬ್ಬರು ಊಟ ಮುಗಿಸಿ ಹೆಸ್ಕಾಂ ಕಚೇರಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮರ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಇಬ್ಬರು ಅಸುನೀಗಿದ್ದಾರೆ.

ಮಂಜುನಾಥ ಅವರು ಚಿನ್ನಮುಳುಗುಂದ ಗ್ರಾಮದ ನಿವಾಸಿಯಾಗಿದ್ದರೆ, ಹನುಮಂತಪ್ಪ ಯತ್ತಿನಹಳ್ಳಿ ಗ್ರಾಮದ ನಿವಾಸಿ.

ಸ್ಥಳಕ್ಕೆ ಹಿರೇಕೆರೂರ ಪೊಲೀಸರು ಭೇಟಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next