Advertisement

Hiriyadka: ಬಸ್‌ – ಸ್ಕೂಟಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

06:26 PM Jul 22, 2023 | Team Udayavani |

ಹಿರಿಯಡ್ಕ: ಬಸ್‌ – ಸ್ಕೂಟಿ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ದಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕದ ಓಂತಿಬೆಟ್ಟು ರಾ.ಹೆ. 169 ಎರಲ್ಲಿ ಶನಿವಾರ(ಜು.22 ರಂದು) ನಡೆದಿದೆ.

Advertisement

ಕೃಷ್ಣ ಪೂಜಾರಿ (60) ಮೃತ ಸವಾರ.

ಕೃಷ್ಣ ಪೂಜಾರಿ ಭೋಜ ಶೆಟ್ಟಿ ಎಂಬುವವರನ್ನು ಕೂರಿಸಿಕೊಂಡು ಉಡುಪಿ ಕಡೆಗೆ ಬರುತ್ತಿದ್ದರು. ಈ ವೇಳೆ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಕೃಷ್ಣ ಪೂಜಾರಿ ಅವರ ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕೃಷ್ಣ ಪೂಜಾರಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಹ ಸವಾರ ಭೋಜ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಮೇಸ್ತ್ರಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಗಾಯಗೊಂಡವರು ನಿವೃತ ಬ್ಯಾಂಕ್‌ ಉದ್ಯೋಗಿಯಾಗಿದ್ದಾರೆ.

ಈ ಕುರಿತು ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next