Advertisement

ಹಿರಿಯಡಕ-ಗುಡ್ಡೆಯಂಗಡಿ ರಸ್ತೆಯಲ್ಲಿ ಯಮಕೂಪ

12:29 PM Sep 15, 2022 | Team Udayavani |

ಮಣಿಪಾಲ: ಹಿರಿಯಡಕ- ಗುಡ್ಡೆಯಂಗಡಿ ರಸ್ತೆಯಲ್ಲಿ (ರಾಜ್ಯ ಹೆದ್ದಾರಿ) ಯಮಕೂಪದ ದರ್ಶನ ಸವಾರರನ್ನು ದಂಗು ಬಡಿಸುವಂತಿವೆ.

Advertisement

ಹಿರಿಯಡಕದಿಂದ ಗುಡ್ಡೆಯಂಗಡಿ ಐದಾರು ಕಿಲೋಮೀಟರ್‌ ರಸ್ತೆಯಲ್ಲಿ ಬೃಹದಾಕಾರದಲ್ಲಿ ಗುಂಡಿಗಳು ಬಾಯೆ¤ರೆದುಕೊಂಡು ವಾಹನ ಸವಾರರಿಗೆ ಅಪಾಯ ಆಹ್ವಾನಿಸುತ್ತಿದೆ. ಹಿರಿಯಡಕ ಕೋಟ್ನಕಟ್ಟೆ ಫ್ರೆಂಡ್ಸ್‌ ಸರ್ಕಲ್‌ನಿಂದ ಆರಂಭಗೊಂಡು ಗುಡ್ಡೆಯಂಗಡಿವರೆಗೆ ರಸ್ತೆಯ ತೀರ ದುಃಸ್ಥಿತಿಯಲ್ಲಿದ್ದು, ವಾಹನಗಳ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದೆ.

ಗುಡ್ಡೆಯಂಗಡಿ ಕಾರ್ಕಳ ಲೋಕೋಪಯೋಗಿ ಇಲಾಖೆ ಉಪ ವಲಯ ವ್ಯಾಪ್ತಿಯಿಂದ ಕಾರ್ಕಳವರೆಗೆ ಇತ್ತೀಚೆಗೆ ಹೊಸ ರಸ್ತೆ ನಿರ್ಮಾಣಗೊಂಡಿದ್ದು, ಉತ್ತಮ ಸಂಚಾರ ರಸ್ತೆಯಾಗಿ ಅಭಿವೃದ್ಧಿಗೊಂಡಿದೆ. ಆದರೆ ಹಿರಿಯಡಕದಿಂದ ಗುಡ್ಡೆಯಂಗಡಿವರೆಗಿನ ರಸ್ತೆ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಇಲ್ಲಿ ಗುಂಡಿಗಳನ್ನು ತಪ್ಪಿಸಿಕೊಂಡು ಹೋಗಲು ಸವಾರರು ಹರಸಾಹಸವನ್ನೇ ಮಾಡಬೇಕಿದೆ. ಗುಂಡಿಗಳಿರುವ ಪರಿಣಾಮ ಹಲವಾರು ಮಂದಿ ಸ್ಕೂಟರ್‌ ಸವಾರರು ನಿಯಂತ್ರಣ ತಪ್ಪಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಈ ಮಾರ್ಗದಲ್ಲಿ ಸಂಚರಿಸುವ ಘನ ಮತ್ತು ಲಘು ವಾಹನಗಳ ತಾಂತ್ರಿಕ ಸಮಸ್ಯೆಗೂ ರಸ್ತೆ ಕಾರಣವಾಗುತ್ತಿದೆ.

ಕಾರ್ಕಳದಿಂದ ಉಡುಪಿ ಕೆಎಂಸಿ ಆಸ್ಪತ್ರೆಗೆ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳನ್ನು ಕರೆ ತರಲಾಗುತ್ತದೆ. ಆದರೆ ಈ ರಸ್ತೆಯಲ್ಲಿ ಆ್ಯಂಬುಲೆನ್ಸ್‌ ಸಹ ಚಲಿಸಲು ಅಸಾಧ್ಯವಾಗಿದೆ. ಈಗಾಗಲೇ ಹಲವಾರು ಜನಪ್ರತಿನಿಧಿಗಳಿಗೆ, ಇಲಾಖೆ ಅವರಿಗೆ ದೂರು ನೀಡಿದರು ಸ್ಪಂದನೆ ದೊರೆತಿಲ್ಲ ಎನ್ನುತ್ತಾರೆ ಸಾರ್ವಜನಿಕರು. ರಸ್ತೆ ಅಭಿವೃದ್ಧಿ ತಡವಾದಲ್ಲಿ, ಕೂಡಲೇ ಗುಂಡಿಗಳನ್ನು ಮುಚ್ಚಿಕೊಡುವಂತೆ ನಾಗರಿಕರು ಸಂಬಂಧಪಟ್ಟ ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳಲ್ಲಿ ಕೋರಿಕೊಂಡಿದ್ದಾರೆ.

Advertisement

ರಸ್ತೆ ಅಭಿವೃದ್ಧಿಗೆ 3 ಕೋ.ರೂ. ಮಂಜೂರು: ಪೇತ್ರಿ-ಹಿರಿಯಡಕ-ಗುಡ್ಡೆಯಂಗಡಿ 11ರಿಂದ 13 ಕಿ.ಮೀ. ವ್ಯಾಪ್ತಿ ಕಾರ್ಕಳ ಸಂಪರ್ಕ ರಸ್ತೆ ಅಭಿವೃದ್ಧಿಗೆ 3 ಕೋ. ರೂ. ಅನುದಾನ ಮಂಜೂರಾಗಿದೆ. ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದ್ದು, ಐದಾರು ಮಂದಿ ಟೆಂಡರ್‌ ಸಲ್ಲಿಸಿದ್ದಾರೆ. ಸೆ.28ಕ್ಕೆ ಟೆಂಡರ್‌ ಸ್ವೀಕಾರ ಕೊನೆಯ ದಿನಾಂಕ. ಟೆಂಡರ್‌ ಅಂತಿಮಗೊಂಡ ಬಳಿಕ ಸರಕಾರದ ಹಂತದಲ್ಲಿ ಪರಿಶೀಲನೆಯಾಗಿ ಅನುಮೋದನೆಯಾಗಲು 15 ದಿನ ಬೇಕಾಗುತ್ತದೆ. ತಾಂತ್ರಿಕ ಬಿಡ್‌ನ‌ಲ್ಲಿ ಅರ್ಹತೆ ಪಡೆದ ಅನಂತರ ಫೈನಾನ್ಶಿಯನ್‌ ಬಿಡ್‌ ಓಪನ್‌ ಆಗುತ್ತದೆ. ಒಟ್ಟಾರೆ ಪ್ರಕ್ರಿಯೆ ನಡೆದು ನವೆಂಬರ್‌ನಿಂದ ಕಾಮಗಾರಿ ಆರಂಭಗೊಳ್ಳುತ್ತದೆ. ಮಳೆಗಾಲವು ಮುಗಿದಿರುವುದರಿಂದ ಅನುಕೂಲವಾಗಲಿದ್ದು, ದ್ವಿಪಥ ರಸ್ತೆ ಕಾಮಗಾರಿ ತತ್‌ಕ್ಷಣ ಆರಂಭಿಸಿ, ವ್ಯವಸ್ಥಿತವಾಗಿ ಪೂರ್ಣಗೊಳಿಸಲಾಗುವುದು. ಪ್ರಸ್ತುತ ಸವಾರರಿಗೆ ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಂಡಿದ್ದೇವೆ. ಸ್ವಲ್ಪ ಮಳೆ ಕಡಿಮೆಯಾಗಿರುವುದರಿಂದ ಈ ವಾರದೊಳಗೆ ಗುಂಡಿಗಳಿಗೆ ತೇಪೆ ಹಾಕಲಾಗುವುದು. – ಜಗದೀಶ್‌ ಭಟ್‌, ಎಇಇ, ಲೋಕೋಪಯೋಗಿ ಇಲಾಖೆ, ಉಡುಪಿ

Advertisement

Udayavani is now on Telegram. Click here to join our channel and stay updated with the latest news.

Next