Advertisement

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

07:55 PM Oct 04, 2024 | Team Udayavani |

ಹಿರಿಯಡ್ಕ: ಪೆರ್ಡೂರು ಮಡಿಸಾಲ್‌ ಹೊಳೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ್ದ ಟಿಪ್ಪರ್‌ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Advertisement

ಹಿರಿಯಡ್ಕ ಠಾಣೆ ಪೊಲೀಸ್‌ ಉಪ ನಿರೀಕ್ಷಕ ಮಂಜುನಾಥ ಮರಬದ, ಉಡುಪಿ ತಾಲೂಕು ಪೆರ್ಡೂರು ಗ್ರಾಮದ ಕುಡ್ತುರಬೈಲು ಮಠದಮಕ್ಕಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋದಾಗ ಇಬ್ಬರು ಹೊಳೆಯ ದಡದ ಬಳಿಯಲ್ಲಿದ್ದ ಮರಳನ್ನು ಕಳ್ಳತನ ಮಾಡುವ ಉದ್ದೇಶದಿಂದ ಟಿಪ್ಪರ್‌ ಟೆಂಪೋಗೆ ಲೋಡ್‌ ಮಾಡುತ್ತಿರುವುದು ಕಂಡು ಬಂದಿತ್ತು.

ಆರೋಪಿಗಳಾದ ದಿಲೀಪ್‌ ಹಾಗು ಸಚಿನ್‌ ಎಂಬವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ ಸರಕಾರಿ ಜಾಗದಿಂದ ಲಾಭಗಳಿಸುವ ಉದ್ದೇಶಗೋಸ್ಕರ ಅಕ್ರಮವಾಗಿ ಮರಳನ್ನು ಕಳವು ಮಾಡಿ ಸ್ವಂತ ಲಾಭಕ್ಕಾಗಿ ಬೇರೆಯವರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಆರೋಪಿತರು ಕೃತ್ಯಕ್ಕೆ ಬಳಸಿದ್ದ ಟೆಂಪೋ, 1.5 ಯುನಿಟ್‌ನಷ್ಟು ಮರಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next