Advertisement

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

11:09 AM Oct 05, 2024 | Team Udayavani |

ಚಿತ್ರದುರ್ಗ: ಶನಿವಾರ ತಡರಾತ್ರಿ ಭಾರೀ ಮಳೆಯಿಂದಾಗಿ ಹಿರಿಯೂರು (Hiriyur) ಸಮೀಪ ಹೆದ್ದಾರಿಗೆ ಕಾಮಗಾರಿ ಮಣ್ಣು ರಸ್ತೆಗೆ ಹರಿದು ಸುಮಾರು ಹತ್ತು ಕಿ.ಮೀ ಟ್ರಾಫಿಕ್ ಜಾಮ್ (Traffic Jam) ಆಗಿರುವ ಘಟನೆ ನಡೆದಿದೆ‌.

Advertisement

ಬೆಂಗಳೂರು ಪೂನಾ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಗೊರ್ಲಡ್ಕು ಬಳಿ ಹೆದ್ದಾರಿಯಲ್ಲಿ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದ್ದು, ವಾಹನಗಳನ್ನು ಸರ್ವೀಸ್ ರಸ್ತೆಯಲ್ಲಿ ಬಿಡಲಾಗುತ್ತಿತ್ತು. ಆದರೆ, ಹೆದ್ದಾರಿಯಲ್ಲಿ ಸುರಿದಿದ್ದ ಮಣ್ಣಿನ ರಾಶಿ ಸರ್ವೀಸ್ ರಸ್ತೆಗೆ ಬಂದು ಜಮಾವಣೆ ಆಗಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ಸುಮಾರು ಹತ್ತು ಕಿ.ಮೀ ಟ್ರಾಫಿಕ್ ಜಾಮ್ ಆಗಿದೆ.

ಮೂರ್ನಾಲ್ಕು ತಾಸು ವಾಹನ ಸಂಚಾರಕ್ಕೆ ಅಡಚಣೆ ಆಗಿದೆ. ಇದರಿಂದ ಹುಬ್ಬಳಿ, ಬೆಂಗಳೂರು, ಧಾರವಾಡ, ಬೆಳಗಾವಿ, ದಾವಣಗೆರೆ ಸೇರಿದಂತೆ ದೂರದ ಊರುಗಳಿಗೆ ಬೇರೆ ಬೇರೆ ಕೆಲಸಗಳಿಗೆ ಹೋಗುವವರಿಗೆ ಸಾಕಷ್ಟು ತೊಂದರೆಯಾಗಿದೆ.

Advertisement

ಹೆದ್ದಾರಿ ಸಮಸ್ಯೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡಿಸಿ ಸಂಚಾರಕ್ಕೆ‌ ಅನುವು ಮಾಡಿಕೊಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next