Advertisement

ಕೋವಿಡ್‌ ಆಸ್ಪತ್ರೆಯಿಂದ 11 ಮಂದಿ ಡಿಸ್ಚಾರ್ಜ್‌

06:27 PM Jul 09, 2020 | Naveen |

ಹಿರಿಯೂರು: ನಗರಕ್ಕೆ ಸೀಮಿತವಾಗಿದ್ದ ಕೋವಿಡ್, ಇದೀಗ ಗ್ರಾಮೀಣ ಭಾಗಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೆಲಸ ಮಾಡುತ್ತಿದ್ದ ಗೊಲ್ಲಹಳ್ಳಿ ಗ್ರಾಮದ 44 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಕಳೆದೆರಡು ದಿನದ ಹಿಂದೆ ಚಿತ್ರದುರ್ಗ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಬುಧವಾರ ನೌಕರನ ವರದಿ ಪಾಸಿಟಿವ್‌ ಬಂದಿದೆ.

Advertisement

ಸಂಬಂಧಿಗಳು ಮತ್ತು ಪ್ರಾಥಮಿಕ ಸಂಪರ್ಕದಲ್ಲಿದ್ದ 15 ಜನರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಿ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 26ಕ್ಕೆ ಏರಿದೆ. ಇವರಲ್ಲಿ ಬುಧವಾರ ಚಿತ್ರದುರ್ಗ ಆಸ್ಪತ್ರೆಯಿಂದ ಇಬ್ಬರು, ಧರ್ಮಪುರ ಕೋವಿಡ್‌ ಆಸ್ಪತ್ರೆಯಿಂದ 9 ಜನರನ್ನು ಡಿಸ್ಚಾರ್ಜ್‌ ಮಾಡಲಾಗಿದೆ. ಈ ಮೊದಲು 9 ಮಂದಿ ಡಿಸ್ಚಾರ್ಜ್‌ ಆಗಿದ್ದು, 20 ಜನ ಗುಣಮುಖರಾದಂತಾಗಿದೆ. ಉಳಿದಂತೆ ಚಿತ್ರದುರ್ಗ ಮತ್ತು ಧರ್ಮಪುರದಲ್ಲಿ 5 ಜನ ಮತ್ತು ಬೆಂಗಳೂರಿನ ಆಸ್ಪತ್ರೆಯಲ್ಲಿ ಒಬ್ಬರು ಸೇರಿದಂತೆ ಆರು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next