Advertisement

ಹಿರಿಯೂರು: ಕಾಂಗ್ರೆಸ್‌ ಕಾರ್ಯಕರ್ತರು-ಮುಖಂಡರ ಸಭೆ

04:19 PM May 27, 2020 | Naveen |

ಹಿರಿಯೂರು: ಮಾಜಿ ಸಚಿವ ಡಿ. ಸುಧಾಕರ್‌ ಕಚೇರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು, ಜಿಪಂ, ತಾಪಂ ಹಾಗೂ ನಗರಸಭೆ ಸದಸ್ಯರ ಸಭೆ ನಡೆಯಿತು.

Advertisement

ಮಾಜಿ ಸಚಿವ ಡಿ. ಸುಧಾಕರ್‌ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಧಿಕಾರ ಪದಗ್ರಹಣ ಸಮಾರಂಭವನ್ನು ವಿಶೇಷವಾಗಿ ಆಚರಿಸಬೇಕಿದೆ. ತಾಲೂಕಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಪಕ್ಷದ ಆದೇಶಗಳನ್ನು ಪಾಲಿಸಬೇಕೆಂದರು. ದೇಶಾದ್ಯಂತ ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನನಗಿರುವ ಕಡಿಮೆ ಅವಧಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಶಿಕ್ಷಣ, ಆರೋಗ್ಯ ವಿವಿಧ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ತಿಳಿಸಿದರು.

ಜಿಪಂ ಸದಸ್ಯರಾದ ಆರ್‌. ನಾಗೇಂದ್ರ ನಾಯ್ಕ, ಗೀತಾ ನಾಗಕುಮಾರ್‌, ಪಾಪಣ್ಣ, ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ, ಮುಖಂಡರಾದ ಖಾದಿ ರಮೇಶ್‌, ಕಂದಿಕೆರೆ ಸುರೇಶ್‌ ಬಾಬು, ನಗರಸಭೆ ಮಾಜಿ ಅಧ್ಯಕ್ಷ ಈ. ಮಂಜುನಾಥ್‌, ಸದಸ್ಯರಾದ ಅಜಯ್‌ಕುಮಾರ್‌, ಈರಲಿಂಗೇಗೌಡ, ಜಿ.ಎಸ್‌. ತಿಪ್ಪೇಸ್ವಾಮಿ, ಗುಂಡೇಶ್‌ಕುಮಾರ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next