Advertisement

ಹಿರಿಯೂರಲ್ಲಿ 25ಕ್ಕೇರಿದ ಸೋಂಕಿತರ ಸಂಖ್ಯೆ

12:46 PM Jul 08, 2020 | Naveen |

ಹಿರಿಯೂರು: ನಗರ ಪೊಲೀಸ್‌ ಠಾಣೆ ಮುಂಭಾಗದಲ್ಲಿರುವ ಅಂಗಡಿ ಮಾಲೀಕರೊಬ್ಬರಿಗೆ (54) ಮಂಗಳವಾರ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿತ್ರದುರ್ಗದ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿ ಪಾಸಿಟಿವ್‌ ಬಂದಿದೆ.

Advertisement

ಚಿತ್ರದುರ್ಗ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಸಂಜೆ ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. ಇವರ ಮನೆಯ ಸುತ್ತ ಸೀಲ್‌ಡೌನ್‌ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 10 ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. 20 ಜನರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಕೋವಿಡ್ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, 200ಕ್ಕೂ ಹೆಚ್ಚು ಜನರ ಗಂಟಲು ದ್ರವ ಮಾದರಿ ವರದಿ ಬರಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next