Advertisement

ಮದ್ಯ ನಿಷೇಧಕ್ಕೆ ಒತ್ತಾಯ

06:12 PM May 11, 2020 | Naveen |

ಹಿರಿಯೂರು: ಕೋವಿಡ್ ಲಾಕ್‌ ಡೌನ್‌ ಸಂದರ್ಭದಲ್ಲಿ ಆರಂಭಿಸಿರುವ ಮದ್ಯದಂಗಡಿಗಳನ್ನು ಮುಚ್ಚಿ ರಾಜ್ಯದಲ್ಲಿ ಮದ್ಯಪಾನವನ್ನು ಸಂಪೂರ್ಣ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಅಖೀಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ವತಿಯಿಂದ ತಹಶೀಲ್ದಾರ್‌ ಜಿ.ಎಚ್‌. ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಸರ್ಕಾರ ಮದ್ಯವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಿರುವುದು ಆಘಾತಕಾರಿ ಬೆಳವಣಿಗೆ. ಕುಡಿತದ ಗೀಳಿಗೆ ಒಳಗಾದವರು ಸಮಾಜದ ಸ್ವಾಸ್ತ್ಯವನ್ನೇ ಹಾಳು ಮಾಡುತ್ತಿದ್ದಾರೆ. ಮದ್ಯ ನಿಷೇಧಕ್ಕೆ ಮಾಡುತ್ತಿರುವ ಹೋರಾಟ ಇಂದು ನಿನ್ನೆಯದಲ್ಲ. ರಾಜ್ಯದಲ್ಲಿ ಕೆಲವೇ ತಿಂಗಳುಗಳ ಹಿಂದೆ ಬಿರುಬಿಸಿಲಿನಲ್ಲಿ ಬರಿಗಾಲಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ಹೊತ್ತುಕೊಂಡು ವಿಧಾನಸೌಧದ ಹೊಸ್ತಿಲು ತುಳಿದು ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದರು. ನೋವಿನಿಂದ ದಣಿದ ಹೆಜ್ಜೆಯ ಪಸೆ ಆರುವ ಮೊದಲೇ ಸರ್ಕಾರ ಮದ್ಯದಂಗಡಿಗಳಿಗೆ ಪರವಾನಗಿ ಕೊಟ್ಟಿರುವುದು ಖಂಡನೀಯ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ.

ಅಖೀಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ರವಿಶಂಕರ್‌, ಸರ್ವಮಂಗಳ ರಮೇಶ್‌, ಶ್ಯಾಮಲಾ ಸತೀಶ್‌, ತ್ರಿವೇಣಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next