Advertisement

ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆಗೆ ಆಕ್ರೋಶ

12:09 PM Jul 09, 2020 | Naveen |

ಹಿರಿಯೂರು: ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಗೆ ಮನವಿ ಸಲ್ಲಿಸಿದರು.

Advertisement

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಡಿ. ಸುಧಾಕರ್‌ ಮಾತನಾಡಿ, ಬಿಜೆಪಿ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸದೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆ‌ಲೆಯನ್ನು ದಿನೇ ದಿನೇ ಏರಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕುಸಿದಿದ್ದು, ಕೇವಲ ಮೂವತ್ತು ರೂ. ಗೆ ಸಿಗುವಂತಹ ಪೆಟ್ರೋಲ್‌ ಅನ್ನು 85 ರೂ. ಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿ 18 ಲಕ್ಷ ಕೋಟಿ ರೂ. ತೆರಿಗೆ ರೂಪದಲ್ಲಿ ಸಂಗ್ರಹಿಸಿ ಗ್ರಾಹಕರ ಮೇಲೆ ಹೊರೆ ಹಾಕಿದೆ ಎಂದು ಆರೋಪಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಖಾದಿ ರಮೇಶ್‌ ಮಾತನಾಡಿ, ಎಲ್ಲೆಡೆ ಕೋವಿಡ್ ವೈರಸ್‌ನಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಕೋವಿಡ್ ರೋಗ ಪೀಡಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಫಲವಾಗಿದೆ. ರೋಗಿಗಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಬೇಕು. ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಪಂ ಸದಸ್ಯ ಪಾಪಣ್ಣ, ತಾಪಂ ಸದಸ್ಯ ಓಂಕಾರಪ್ಪ, ನಗರಸಭೆ ಸದಸ್ಯ ಈರಲಿಂಗೇಗೌಡ, ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ, ಮುಖಂಡರಾದ ಕಲ್ಲಟ್ಟಿ ತಿಪ್ಪೇಸ್ವಾಮಿ, ಜಿ.ಎಲ್‌. ಮೂರ್ತಿ, ಎಲ್‌. ಜಿ. ರತ್ನಮ್ಮ, ಗುಂಡೇಗೌಡ, ಮದಲ ಮರಿಯಾ, ಗೀತಾ, ಕವಿತಾ, ದಾದಾಪೀರ್‌, ಲೋಕೇಶ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next