Advertisement

ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ- ಚಂದ್ರ ಕಂಬಳ | Udayavani

10:22 PM Dec 14, 2020 | Team Udayavani |
ಶಿರ್ವ: ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ ಶಿರ್ವ ನಡಿಬೆಟ್ಟು ಸೂರ್ಯ-  ಚಂದ್ರ ಸಂಪ್ರದಾಯ ಬದ್ಧ ಕಂಬಳ ರವಿವಾರ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತ ಮೊಕೇಸರ ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು. ಅನಾದಿ ಕಾಲದಿಂದಲೂ ಸಂಪ್ರದಾಯಬದ್ಧವಾಗಿ ನಡೆಯುತ್ತಿದ್ದ ಶಿರ್ವ ನಡಿಬೆಟ್ಟು ಕಂಬಳವು 1996ರಿಂದ 2014ರವರೆಗೆ ಸೂರ್ಯಚಂದ್ರ ಜೋಡುಕರೆಯಾಗಿ ನಡೆದು ಪ್ರಸಿದ್ಧಿಯಾಗಿತ್ತು.
Advertisement

Udayavani is now on Telegram. Click here to join our channel and stay updated with the latest news.

Next