Advertisement

ಗ್ರಾಮಗಳ ಇತಿಹಾಸ ದಾಖಲು: ಸಿ.ಟಿ. ರವಿ

11:39 PM Sep 09, 2019 | Team Udayavani |

ಮಂಡ್ಯ: “ರಾಜ್ಯದಲ್ಲಿರುವ ಎಲ್ಲಾ ಗ್ರಾಮಗಳ ಹಿನ್ನೆಲೆಯನ್ನು ದಾಖಲಿಸುವ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ಅದರಂತೆ ಜಿಲ್ಲೆಯ ಪ್ರತಿ ಗ್ರಾಮದ ಇತಿಹಾಸವನ್ನು ದಾಖಲಿಸಲು ಕ್ರಮ ವಹಿಸುವಂತೆ’ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಮಹತ್ಕಾರ್ಯಕ್ಕೆ ಕನ್ನಡ, ರಾಜ್ಯಶಾಸ್ತ್ರ ಮತ್ತು ಸಮಾಜಶಾಸ್ತ್ರ ವ್ಯಾಸಂಗ ಮಾಡುತ್ತಿರುವ ಪದವಿ ಅಥವಾ ಪಿಯುಸಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರಲ್ಲದೆ, ಪ್ರತಿ ಮೂರು ವಿದ್ಯಾರ್ಥಿಗಳನ್ನು ಒಂದು ತಂಡದಂತೆ ರೂಪಿಸಿ ಗ್ರಾಮದ ಹುಟ್ಟು, ಊರಿನ ಗ್ರಾಮದೇವತೆ, ಆಚಾರ, ವಿಚಾರ, ಸಂಪ್ರದಾಯ, ಪದ್ಧತಿ, ಧಾರ್ಮಿಕ ಹಿನ್ನೆಲೆ ಸೇರಿ ಎಲ್ಲಾ ಮಾಹಿತಿ ಸಂಗ್ರಹಿಸ ಬೇಕೆಂದು ಹೇಳಿದರು.

ಗ್ರಾಮದ ಇತಿಹಾಸದ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಿದ ನಂತರ ತಜ್ಞರೊಂದಿಗೆ ಕುಳಿತು ಪರಿಶೀಲನೆ ನಡೆಸಬೇಕು. ಬಳಿಕ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ರಾಜ್ಯದ ಯಾವುದೇ ಗ್ರಾಮದ ಇತಿಹಾಸದ ಮಾಹಿತಿಯನ್ನು ಯಾರು ಎಲ್ಲಿ ಬೇಕಾದರೂ ಕುಳಿತಲ್ಲೇ ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next