Advertisement

ಹಿಟ್ ಅಂಡ್ ರನ್ : ಪಣಂಬೂರಿನಲ್ಲಿ ಬೈಕ್‌ ಸವಾರ ದಾರುಣ ಸಾವು 

11:48 AM Apr 15, 2017 | |

ಮಂಗಳೂರು : ಇಲ್ಲಿನ ಎನ್‌ಎಂಪಿಟಿ ಬಳಿ ಹೆದ್ದಾರಿಯಲ್ಲಿ ವಾಹನವೊಂದು ಢಿಕ್ಕಿಯಾಗಿ ಪರಾರಿಯಾದ ಕಾರಣ ಬೈಕ್‌ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. 

Advertisement

ವಾಹನ ಹಿಂಬದಿಯಿಂದ ಢಿಕ್ಕಿಯಾಗಿದೆ ಎಂದು ಹೇಳಲಾಗಿದ್ದು, ಬೈಕ್‌ ಚಲಾಯಿಸುತ್ತಿದ್ದ ಚೊಕ್ಕಬೆಟ್ಟು ನಿವಾಸಿ ಅಬ್ದುಲ್‌ ಹಿಕ್ರಂ ಎನ್ನುವ ಯುವಕ ರಸ್ತೆಗೆ ಅಪ್ಪಳಿಸಿ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ರಸ್ತೆಗೆ ಬಿದ್ದ ಪರಿಣಾಮ ತಲೆ ಓಡೆದು ತೀವ್ರವಾಗಿ ರಕ್ತ ಸ್ರಾವವಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಪೊಲೀಸರು  ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಢಿಕ್ಕಿಯಾಗಿ ಪರಾರಿಯಾದ ವಾಹನದ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next