Advertisement

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

03:35 PM Sep 20, 2021 | Team Udayavani |

ಶಿವಮೊಗ್ಗ: ಅರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮೊಮ್ಮಗನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೂ ಖಾಸಗಿ ಆಸ್ಪತ್ರೆಗೆ ದೌಡಾಯಿಸುವ ರಾಜಕಾರಣಿಗಳ ಮಧ್ಯೆ ಆರಗ ಜ್ಞಾನೇಂದ್ರ ಅವರ ಕುಟುಂಬದ ನಿರ್ಧಾರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಗಳಿಸಿದೆ.

Advertisement

ಆರಗ ಜ್ಞಾನೇಂದ್ರ ಅವರ ಮೊಮ್ಮಗ ಒಂಭತ್ತು ತಿಂಗಳ ಆರ್ಯವರ್ಥನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪರೀಕ್ಷಿಸಿ, ಅಲ್ಲಿಯೇ ದಾಖಲು ಮಾಡಲು ಚಿಕಿತ್ಸೆ ಕೊಡಿಸಲಾಯಿತು.

ತೀರ್ಥಹಳ್ಳಿಗೆ ಆಗಮಿಸಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೊಮ್ಮಗನ ಆರೋಗ್ಯ ವಿಚಾರಿಸಿದರು. ಆತನೊಂದಿಗೆ ಸಮಯ ಕಳೆದರು. ಜ್ಞಾನೇಂದ್ರ ಅವರ ಬೆಂಬಲಿಗರು ಇದರ ಫೋಟೊ, ವಿಡಿಯೋ ತೆಗೆದಿದ್ದರು. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಸಿಇಟಿ ಫಲಿತಾಂಶ ಪ್ರಕಟ: ಎಲ್ಲಾ ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದ ಮೈಸೂರಿನ ಮೇಘನ್ ಎಚ್.ಕೆ

ಗೃಹ ಸಚಿವರು ತಮ್ಮ ಮೊಮ್ಮಗನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next