Advertisement

Karnataka Election ಸಿದ್ದಾಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಅಮಿತ್ ಶಾ

06:40 PM Apr 29, 2023 | Team Udayavani |

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಧ್ಯಾಹ್ನ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರ ಪರ ಮತ ಯಾಚಿಸಿದರು.

Advertisement

ಈ ವೇಳೆ ಮಾತನಾಡಿದ ಶಾ,” ರಾಜ್ಯದಲ್ಲಿ ಬಿಜೆಪಿ ಸರಕಾರ 4% ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದೆ. ಆ ಮೀಸಲಾತಿ ಸಂವಿಧಾನದ ಪ್ರಕಾರ ಇರಲಿಲ್ಲ. ನಮ್ಮ ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ಅನುಮತಿಸುವುದಿಲ್ಲ. ಅವರ ರಿವರ್ಸ್ ಗೇರ್ ಸರಕಾರ ಬಂದರೆ ಮತ್ತೊಮ್ಮೆ ಮುಸ್ಲಿಂ ಮೀಸಲಾತಿಯನ್ನು ತರುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತದೆ. ನಿಮಗೆ ಅದು ಬೇಕಾ” ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರು, ಸಾವಿರಾರು ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ರೋಡ್ ಶೋ ಬಳಿಕ ಮಂಗಳೂರು ನಗರದಲ್ಲಿ ರೋಡ್ ಶೋ ನಲ್ಲಿ ಭಾಗಿಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next