Advertisement

ಸುಳ್ಯ ವಿಧಾನಸಭಾ ಚುನಾವಣೆ ಪ್ರಚಾರ ಚುರುಕು: ಎಚ್‌.ಎಂ.ನಂದಕುಮಾರ್‌ ಪಕ್ಷೇತರವಾಗಿ ಸ್ಪರ್ಧೆ

11:54 PM Apr 12, 2023 | Team Udayavani |

ಸುಳ್ಯ: ಬಿಜೆಪಿ ಅಭ್ಯರ್ಥಿ ಘೋಷಣೆಯೊಂದಿಗೆ ಸುಳ್ಯ ಕ್ಷೇತ್ರದ ಚುನಾವಣೆ ರಂಗ ಹೊಸ ರೂಪು ಪಡೆದಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡರಲ್ಲೂ ಹೊಸ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು ಜತೆಗೆ ಕಾಂಗ್ರೆಸ್‌ನ ಟಿಕೆಟ್‌ ವಂಚಿತ ಎಚ್‌.ಎಂ. ನಂದ ಕುಮಾರ್‌ ಪಕ್ಷೇತರವಾಗಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.

Advertisement

ಸುಳ್ಯದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಅವರು ಈಗಾಗಲೇ ಚುನಾವಣ ಕಚೇರಿಯನ್ನು ತೆರೆದಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಕೈಗೊಂಡಿದ್ದಾರೆ.

ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿಯಾಗಿರುವ ಭಾಗೀರಥಿ ಮುರುಳ್ಯ ಅವರು ಬುಧವಾರ ದೇವಸ್ಥಾನಗಳಿಗೆ ಭೇಟಿ ನೀಡಿದರು. ಸಂಜೆ ಕುಕ್ಕೆಗೆ ಆಗಮಿಸಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಚುನಾವಣೆ ಪ್ರಚಾರ ಸಂಬಂಧ ಪಕ್ಷದ ಪ್ರಮುಖರ ಜತೆ ಚರ್ಚಿಸಿದರು.

ಇನ್ನೊಂದೆಡೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಂದ ಕುಮಾರ್‌ ಅವರು ತಮ್ಮ ಬೆಂಬಲಿಗರ ಒತ್ತಾಸೆ ಯಂತೆ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ನಾಮ ಪತ್ರ ಸಲ್ಲಿಸುವ ನಿರೀಕ್ಷೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next