Advertisement

ರಾತ್ರಿ ಊಟ ಮಾಡಿ ಮಲಗಿದ್ದ ಫೋಟೋಗ್ರಾಫರ್ ಬೆಳಗಾಗುತ್ತಲೇ ಭೀಕರ ಹತ್ಯೆ

09:45 PM Jan 14, 2023 | Team Udayavani |

ಚಿತ್ರದುರ್ಗ: ಅಕ್ಕನ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಭೀಕರವಾಗಿ ಹತ್ಯೆಯಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮದಲ್ಲಿ ನಡೆದಿದೆ.

Advertisement

ಮೃತ ವ್ಯಕ್ತಿಯನ್ನು ಬಸವರಾಜ್ ಎನ್ನಲಾಗಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಬಸವರಾಜ್ ಅಕ್ಕನ ಜೊತೆ ಊಟ ಮಾಡಿ ಮಲಗಿದ್ದರು ಬೆಳಿಗ್ಗೆ ಎದ್ದು ನೋಡುವಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಮುಖದ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.

ಈ ಸಂಬಂಧ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಹೊಳಲ್ಕೆರೆ ವೃತ್ತ ನಿರೀಕ್ಷಕ ರವೀಶ್ ಸೇರಿದಂತೆ ಹಲವಾರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹತ್ಯೆಯಾದ ಬಸವರಾಜನಿಗೆ ಮೂರು ಮಕ್ಕಳಿದ್ದು ,ಹೆಂಡತಿ ತವರು ಮನೆಗೆ ಹೆರಿಗೆಗೆ ಹೋಗಿ 2 ತಿಂಗಳಾಗಿತ್ತು. ಈ ಸಂದರ್ಭದಲ್ಲಿ ನಡೆದ ಹತ್ಯೆಯಿಂದ ಸಾಕಷ್ಟು ಅನುಮಾನಗಳು ಮೂಡಿದ್ದು ಪೊಲೀಸರ ತನಿಖೆಯಿಂದ ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಈ ಹತ್ಯೆಯಿಂದ ಶಿವಗಂಗ ಗ್ರಾಮ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ನಾಗರಿಕರು ಬೆಚ್ಚು ಬಿದ್ದಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

Advertisement

ಇದನ್ನೂ ಓದಿ: ವಾಡಿ: ಗೂಡ್ಸ್ ರೈಲು ಅಪಘಾತ… ತಪ್ಪಿದ ದುರಂತ

Advertisement

Udayavani is now on Telegram. Click here to join our channel and stay updated with the latest news.

Next