Advertisement

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

01:22 PM May 05, 2024 | Team Udayavani |

ಹೊಳೆನರಸೀಪುರ: ಹೊಳೆನರಸೀಪುರ ಶಾಸಕ ಹೆಚ್.ಡಿ. ರೇವಣ್ಣ ಬಂಧನವಾದ ಹಿನ್ನೆಲೆ ಜೆಡಿಎಸ್ ಮುಖಂಡರು ಮತ್ತು ಸ್ಥಳೀಯರು ಪಟ್ಟಣ ಬಂದ್ ಗೆ ಕರೆ ಕೊಟ್ಟಿದ್ದರು.

Advertisement

ಲೈಂಗಿಕ ದೌರ್ಜನ್ಯ ಕಿರುಕುಳ ಪ್ರಕರಣದಲ್ಲಿ ರೇವಣ್ಣನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಕಾರಣ ಜೆಡಿಎಸ್ ನಾಯಕರು ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಪ್ರಾರಂಭವಾದ 5 ನಿಮಿಷದಲ್ಲಿ ಪ್ರತಿಭಟನೆ ಮುಕ್ತಾಯಗೊಳಿಸಿದ ಕಾರ್ಯಕರ್ತರು ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರಿಗಿಂತ ಎರಡು ಪಟ್ಟು ಹೆಚ್ಚು ಬಿಗಿ ಪೊಲೀಸ್ ಬಂದೋಬಸ್ತ್ ಇದ್ದ ಕಾರಣ ಪೊಲೀಸ್ ಭದ್ರತೆಯ ಕಂಡು ಕಾರ್ಯಕರ್ತರು ಕೇವಲ ಐದು ನಿಮಿಷದಲ್ಲಿ ಪ್ರತಿಭಟನೆ ಮುಗಿಸಿದರು.

ಹೊಳೆನರಸೀಪುರಕ್ಕೆ ಕೊನೆಗೂ ಸಿಕ್ಕ ತಾತ್ಕಾಲಿಕ ಸ್ವಾತಂತ್ರ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಲೇವಡಿ ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next