Advertisement

ಮುಂದುವರಿದ ಮಳೆ: ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

08:07 AM Jul 07, 2022 | Team Udayavani |

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಕಾರಣ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು (ಗುರುವಾರ) ರಜೆ ಘೋಷಣೆ ಮಾಡಲಾಗಿದೆ.

Advertisement

ಬುಧವಾರ ಸಂಜೆ ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?

ರಾಜ್ಯದ ಕರಾವಳಿ ಭಾಗದಲ್ಲೂ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಉಭಯ ಜಿಲ್ಲೆಗಳಲ್ಲೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next