Advertisement

Chikkamagaluru: ಕಾಡಾನೆಗಳ ಹಾವಳಿ; ಕೆಲವು ಶಾಲೆಗಳಿಗೆ ರಜೆ ಘೋಷಣೆ

12:56 PM Jan 29, 2024 | Team Udayavani |

ಚಿಕ್ಕಮಗಳೂರು: ನಗರದ ಸಮೀಪದ ಕದ್ರಿಮಿದ್ರಿ, ಮೂಗ್ತಿ ಹಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು ಮುಂಜಾಗೃತ ಕ್ರಮವಾಗಿ ಈ ಭಾಗದ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಬೇಲೂರು ಮಾರ್ಗವಾಗಿ ಆಗಮಿಸಿರುವ ಕಾಡಾನೆಗಳ ಹಿಂದು ಕಳೆದ ಎರಡು ಮೂರು ದಿನಗಳ ಹಿಂದೆ ಕೆ.ಆರ್.ಪೇಟೆ, ಮಾವಿನಕೆರೆ ಭಾಗದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿತ್ತು. ಸೋಮವಾರ ಬೆಳಿಗ್ಗೆ ನಗರ ಸಮೀಪದ ಕದ್ರಿಮಿದ್ರಿ ಭಾಗದಲ್ಲಿ ಮೂವತ್ತರಿಂದ ನಾಲವತ್ತು ಆನೆಗಳ ಹಿಂಡು ಕಾಣಿಸಿಕೊಂಡಿವೆ ಈ ಭಾಗದಲ್ಲಿ ಶಾಲಾ ಕಾಲೇಜುಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ರವೀಶ್ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಕಾಡಾನೆಗಳ ಹಿಂಡು ಸುತ್ತಮುತ್ತಲ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದು ಆನೆಗಳನ್ನು ಕಾಡಿಗೆ ಅಟ್ಟುವ ಕಾರ್ಯ ನಡೆಸಲಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಈ ಭಾಗದಲ್ಲಿ ಜನರು ಸಂಚರಿಸದಂತೆ ಎಚ್ಚರಿಕೆ ನೀಡಿದ್ದಾರೆ.

ಬರಗಾಲದಿಂದ ರೈತರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಕಾಡಾನೆಗಳ ಹಿಂಡು ಪದೇಪದೆ ಜಮೀನುಗಳಿಗೆ ನುಗ್ಗಿ ಬೆಳೆ ಹಾಳು ಮಾಡುತ್ತಿರುವುದು ಇಲ್ಲಿನ ಜನರಿಗೆ ತಲೆನೋವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next