Advertisement

ವರುಣಾರ್ಭಟ: ಕೇರಳದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ

09:46 PM Jul 04, 2023 | Team Udayavani |

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಮಂಗಳವಾರವೂ ಮುಂಗಾರಿನ ಆರ್ಭಟ ಮುಂದುವರಿದಿದ್ದು, ಕೇರಳದ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.

Advertisement

ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎರ್ನಾಕುಳಂ, ಕೊಟ್ಟಾಯಂ, ಇಡುಕ್ಕಿ, ತ್ರಿಶೂರ್‌, ಕಣ್ಣೂರು ಹಾಗೂ ಕಾಸರಗೋಡಿನಲ್ಲಿ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದೆಡೆ ಮುಂಬೈನಲ್ಲಿ ಒಂದು ದಿನದ ಬ್ರೇಕ್‌ ನೀಡಿದ್ದ ವರುಣಾ ಮತ್ತೆ ಮಂಗಳವಾರ ಆರ್ಭಟ ಮುಂದುವರಿಸಿದ್ದಾನೆ. ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಐಎಂಡಿ ಮುಂಬೈಗೆ ಹಳದಿ ಅಲರ್ಟ್‌ ನೀಡಿದೆ.

ಇನ್ನು ಗುಜರಾತ್‌ನಲ್ಲಿ ಜು.6ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿಯೂ ಐಎಂಡಿ ಎಚ್ಚರಿಕೆ ನೀಡಿದೆ. ಏತನ್ಮಧ್ಯೆ, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನಕ್ಕೆ ಬಂದಿಳಿಯಬೇಕಿದ್ದ 1 ವಿಮಾನವನ್ನು ಲಖನೌಗೆ ಹಾಗೂ 2 ವಿಮಾನಗಳನ್ನು ಅಮೃತಸರ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next