Advertisement

“ಹಾಲಿಡೇ ಪ್ಯಾಕೇಜ್‌ ಅಭ್ಯರ್ಥಿಗಳಿಂದ ಅಭಿವೃದ್ಧಿ ನಿರೀಕ್ಷಿಸಲಾಗದು’

11:08 PM Apr 12, 2019 | Team Udayavani |

ಬೈಂದೂರು: ಪ್ಯಾಕೇಜ್‌ ಟೂರ್‌ನಲ್ಲೆ ಕಳೆಯುವ ಅಭ್ಯರ್ಥಿಗಳಿಂದ ಕ್ಷೇತ್ರದ ಪ್ರಗತಿ ನಿರೀಕ್ಷಿಸುವುದಾದರು ಹೇಗೆ ಎಂದು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಸೊರಬ ಶಾಸಕ ಕುಮಾರ ಬಂಗಾರಪ್ಪ ಲೇವಡಿ ಮಾಡಿದರು.

Advertisement

ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಕಳೆದ ವಿಧಾನಸಭೆಯ ಚುನಾವಣೆಯ ಬಳಿಕ ಈಗಿನ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಮಲೆನಾಡು ಭಾಗದಲ್ಲಿ ಕಾಣ ಸಿಗಲಿಲ್ಲ. ಆ ಬಳಿಕ ವಿದೇಶ ಪ್ರವಾಸದಲ್ಲಿದ್ದ ಅವರನ್ನು ಜೆಡಿಎಸ್‌ ವತಿಯಿಂದ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಲಾಗಿತ್ತು. ಅದಾದ ಬಳಿಕ ಮತ್ತೆ ಪ್ಯಾಕೇಜ್‌ ಟೂರ್‌ನಲ್ಲಿ ವಿದೇಶದಲ್ಲಿರುವ ಅವರು ಈ ಬಾರಿ ಮತ್ತೆ ಲೋಕಸಭಾ ಅಭ್ಯರ್ಥಿಯಾಗಿ ಮತಯಾಚಿಸಲು ಬಂದಿದ್ದಾರೆ ಎಂದು ತಿಳಿಸಿದರು.

ದೇಶದ ಭದ್ರತೆ, ಅಭಿವೃದ್ದಿ, ಜನಪರ ಕಲ್ಯಾಣ ಯೋಜನೆಗಳಲ್ಲಿ ಮೋದಿ ಸರಕಾರ ತೆಗೆದುಕೊಂಡ ದಿಟ್ಟ ನಿಲುವು ಇಂದು ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿದೆ ಎಂದರು.

ಡಿ.ಕೆ ಶಿವಕುಮಾರ್‌ ಉಸ್ತುವಾರಿ ಕುರಿತು ಪ್ರತಿಕ್ರಿಯಿಸಿದ ಅವರು ಕನಕಪುರ ಹೊರತುಪಡಿಸಿದರೆ ಉಳಿದ ಕಡೆ ಅವರ ವರ್ಚಸ್ಸುಗಳಿಲ್ಲ. ಹೀಗಾಗಿ ಬಿಜೆಪಿ ತಳಮಟ್ಟದ ಕಾರ್ಯಕರ್ತರನ್ನು ಹೊಂದಿದೆ. ಇಲ್ಲಿ ಯಾರ ಹವಾನು ನಡೆಯಲ್ಲ ಎಂದು ಟಾಂಗ್‌ ನೀಡಿದರು.

ಜಿ.ಪಂ. ಸದಸ್ಯ ಸುರೇಶ್‌ ಬಟ್ವಾಡಿ,ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರವೀಣ ಗುಂಡ್ಮಿ, ಯುವ ಮೋರ್ಚಾದ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ಉಪ್ಪುಂದ, ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ, ತಾ.ಪಂ ಸದಸ್ಯ ಪುಷ್ಪರಾಜ್‌ ಶೆಟ್ಟಿ ಉಪಸ್ಥಿತರಿದ್ದರು.ಮಂಡಲದ ಕಾರ್ಯದರ್ಶಿ ದೀಪಕ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಬಾಲಚಂದ್ರ ಭಟ್‌ ವಂದಿಸಿದರು.

Advertisement

ರಾಘವೇಂದ್ರ ಪರ ಪ್ರಚಾರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಸೊರಬ ಶಾಸಕ ಕುಮಾರ ಬಂಗಾರಪ್ಪ ಹೊಸ್ಕೋಟೆ,ಬಿಜೂರು,ಕೆರ್ಗಾಲು ಮುಂತಾದ ಕಡೆಗಳಲ್ಲಿ ಚುನಾವಣೆ ಪ್ರಚಾರ ನಡೆಸಿದರು.ಜಿ.ಪಂ ಸದಸ್ಯ ಸುರೇಶ್‌ ಬಟ್ವಾಡಿ, ನಿ,ತಾ.ಪಂ ಸದಸ್ಯ ಪುಷ್ಪರಾಜ್‌ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ,.ಬಾಲಚಂದ್ರ ಭಟ್‌, ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next