Advertisement

ಡಿಕೆಶಿ ಅರೆಸ್ಟ್:‌ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

09:43 AM Sep 05, 2019 | keerthan |

ರಾಮನಗರ: ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ರಾಮನಗರ ಜಿಲ್ಲಾಧಿಕಾರಿ ಎಂ ಎಸ್‌ ಅರ್ಚನಾ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಡಿಕೆಶಿ ಅವರ ಬಂಧನದ ಹಿನ್ನಲೆಯಲ್ಲಿ ರಾಮನಗರ ಮತ್ತು ಜಿಲ್ಲೆಯ ಕನಕಪುರದಲ್ಲಿ ಬಿಗುವಿನ ವಾತಾವರಣವಿದೆ. ಬಂಧನ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಲ್ಲಲ್ಲಿ ಟೈರ್‌ ಗಳಿಗೆ ಬೆಂಕಿ ಹಚ್ಚಿದ ಪ್ರಕರಣವೂ ಬೆಳಕಿಗೆ ಬಂದಿದೆ.

ಕನಕಪುರ – ಮೈಸೂರು ಹೆದ್ದಾರಿಯಲ್ಲಿ ಟೈರ್‌ ಗಳಿಗೆ ಬೆಂಕಿ ಹಚ್ಚಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ರಾಮನಗರದ ಐಜೂರು ವೃತ್ತದಲ್ಲಿ ಭದ್ರತೆ ದೃಷ್ಠಿಯಿಂದ ಎರಡು ಕೆಎಸ್‌ ಆರ್‌ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next